ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಕಿಚ್ಚು ದಿನೇ ದಿನೆ ಹೆಚ್ಚುತ್ತಲಿದೆ. ದೇವಸ್ಥಾನಕ್ಕೆ ನೇಮಕ ಮಾಡಿರುವ ಮೇಲುಸ್ತುವಾರಿ ಸಮಿತಿ ರದ್ದುಗೊಳಿಸದಿದ್ದರೆ, ಉಗ್ರ ಸ್ವರೂಪದ ಹೋರಾಟಕ್ಕೆ ಈಡಿಗರ ಸಂಘ ರೂಪು ರೇಷೆಗಳನ್ನು ಸಿದ್ಧಪಡಿಸುತ್ತಿದೆ. ಅದಕ್ಕಾಗಿ, ಜಾತ್ಯತೀಯ ಸಭೆಯನ್ನು ಕರೆದಿದ್ದು, ಪರಿಸ್ಥಿತಿ ಇನ್ನಷ್ಟು ತಾರಕಕ್ಕೆ ಹೋಗುವ ಸಾಧ್ಯತೆ ಇದೆ.
ಈ ಬಗ್ಗೆ ಈಡಿಗ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶೀಧರ್ ಅವರು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
9ರಂದು ಶಿವಮೊಗ್ಗದಲ್ಲಿ ಸಭೆ:
ನಗರದಲ್ಲಿರುವ ಆರ್ಯ ಈಡಿಗ ಸಮುದಾಯ ಭವನದಲ್ಲಿ ನವೆಂಬರ್ 9ರಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಇದರಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಶಾಸಕ ಮಧು ಬಂಗಾರಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಸೇರಿದಂತೆ ಎಲ್ಲ ಜಾತಿಯ ನಾಯಕರು ಸೇರಲಿದ್ದಾರೆ.