ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನ.೮ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ.
ಯಡಿಯೂರಪ್ಪ ಅವರು ಅಂದು ಬೆಳಗ್ಗೆ ೮.೩೦ಕ್ಕೆ ಬೆಂಗಳೂರಿನಿoದ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ. ನಂತರ ೧೦ಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ೩.೩೦ಕ್ಕೆ ಸರ್ಕ್ಯೂಟ್ ಹೌಸ್’ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸಿದ್ದರಾಮಯ್ಯ ಅವರು ಬೆಳಗ್ಗೆ ೧೦.೩೦ಕ್ಕೆ ಮಾಜಿ ಶಾಸಕ ಶ್ರೀನಿವಾಸ್ ಅವರ ಮಗಳ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩.೩೦ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.