ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭದ್ರಾವತಿ ಮತ್ತು ಮಸರಳ್ಳಿ ಮಧ್ಯೆ ರೈಲ್ವೆ ಲೆವಲ್ ಕ್ರಾಸಿಂಗ್’ನಲ್ಲಿ ತಾಂತ್ರಿಕ ಪರಿಶೀಲನೆ ಹಿನ್ನೆಲೆ ನವೆಂಬರ್ 12ರಂದು ಈ ಮಾರ್ಗದಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದ್ದಾರೆ.
ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್ ಸಂಖ್ಯೆ 27ರಲ್ಲಿ ತಾಂತ್ರಿಕ ಪರಿಶೀಲನೆ ಮಾಡಬೇಕಿರುವುದರಿಂದ ಅಂದು ಬೆಳಗ್ಗೆ 8 ರಿಂದ ರಾತ್ರಿ 8ರ ವರೆಗೆ ರಸ್ತೆ ಸಂಚಾರ ಸ್ಥಗಿತಗೊಳಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ಮಾಡುವಂತೆ ಅಧಿಸೂಚನೆಯಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
* ಸಂಚಾರಕ್ಕೆ ಪರ್ಯಾಯ: ಎಲ್ಲ ವಾಹನಗಳು ನವೆಂಬರ್ 12ರಂದು ಶಿವನಿ ಕ್ರಾಸ್- ಅಂತರಗಂಗೆ ಮುಖಾಂತರ ಅಥವಾ ಬಾರಂದೂರು -ಹಳ್ಳಿಕೇರಿ ಮುಖಾಂತರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.