ಸುದ್ದಿ ಕಣಜ.ಕಾಂ
ಸೊರಬ: ಅರಣ್ಯ ಇಲಾಖೆ, ಜೀವವೈವಿಧ್ಯ ಮಂಡಳಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನವೆಂಬರ್ 13ರಂದು ಗುಡವಿ ಪಕ್ಷಿಧಾಮದಲ್ಲಿ ಪರಿಸರ ಜಾಗೃತಿ, ಸಮಾಲೋಚನೆ ಸಭೆ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಸಭೆಯ ನೇತೃತ್ವವನ್ನು ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ವಹಿಸಲಿದ್ದಾರೆ. ಈ ಸಭೆಯಲ್ಲಿ ಪಕ್ಷಿ ತಜ್ಞರು ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.