ಸುದ್ದಿ ಕಣಜ.ಕಾಂ
ಶಿವಮೊಗ್ಗ: ನೂರಾರು ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರುವ ಮರಾಠಿಗರೂ ಬೈ ಬ್ಲಡ್ ಕನ್ನಡಿಗರು. ಅವರ ಅಭಿವೃದ್ಧಿಗಾಗಿ ನಿಗಮ ರಚಿಸಲಾಗಿದೆ. ವಿರೋಧಿಸುವವರು ಇದನ್ನು ತಿಳಿದುಕೊಳ್ಳಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ರಚಿಸಿರುವುದು ಮರಾಠ ಅಭಿವೃದ್ಧಿ ಪ್ರಾಧಿಕಾರ ಅಲ್ಲ, ಮರಾಠ ಸಮುದಾಯ ಅಭಿವೃದ್ಧಿ ನಿಗಮ. ಎರಡ ಮಧ್ಯೆ ಸಾಕಷ್ಟು ವ್ಯತ್ಯಾಸವಿದೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಜಿಲ್ಲೆ ಮತ್ತು ಜಾತಿವಾರು ಮಂತ್ರಿ ಸ್ಥಾನ ನೀಡುವುದು ಕಷ್ಟ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಮತ್ತು ಕೇಂದ್ರದ ನಾಯಕರು ನಿರ್ಣಯ ಕೈಗೊಳ್ಳಲಿದ್ದಾರೆ. ಇನ್ನೂ ಮರ್ನಾಲ್ಕು ದಿನ ಕಾದು ನೋಡೋಣ ಎಂದು ಹೇಳಿದರು.
ವಿಡಿಯೋ ಸುದ್ದಿಗಾಗಿ ಕ್ಲಿಕ್ ಮಾಡಿ…
https://youtu.be/0V2w2h1_-zM