ಸುದ್ದಿ ಕಣಜ.ಕಾಂ
ಶಿವಮೊಗ್ಗ: ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಅಖಿಲ ಭಾರತೀಯ ವೀರಶೈವ ಮಹಾಸಭಾದ ಶಿವಮೊಗ್ಗ ಘಟಕದಿಂದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.
ನೆರೆಯ ರಾಜ್ಯಗಳಲ್ಲಿ ವೀರಶೈವ ಲಿಂಗಾಯತ ಧರ್ಮಕ್ಕೆ ಕೇಂದ್ರ ಸರ್ಕಾರ ಹಿಂದುಳಿದ ವರ್ಗದ ಪಟ್ಟಿಗೆ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯದಲ್ಲೂ ವೀರಶೈವ ಸಮುದಾಯವನ್ನು ಒಬಿಸಿಗೆ ಸೇರಿಸ ಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.
ಕರ್ನಾಟಕದಲ್ಲಿ 6.50 ಕೋಟಿ ಜನಸಂಖ್ಯೆಯಲ್ಲಿ ಒಂದೂವರೆ ಕೋಟಿ ವೀರಶೈವ ಲಿಂಗಾಯತರೇ ಆಗಿದ್ದಾರೆ. ಸಮುದಾಯದಲ್ಲಿ 86 ಉಪ ಪಂಗಡಗಳಿದ್ದು, ಹೆಚ್ಚಿನ ಕುಟುಂಬಗಳು ಕೃಷಿಯನ್ನೇ ಅವಲಂಬಿಸಿವೆ ಎಂದು ತಿಳಿಸಲಾಗಿದೆ.
ನಿಗಮ ಸ್ಥಾಪನೆಗೆ ಧನ್ಯವಾದ: ವೀರಶೈವ ಲಿಂಗಾಯಿತ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮಹಾಸಭಾದಿಂದ ಅಭಿನಂದಿಸಲಾಯಿತು.
ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್, ಮಹೇಶ್ ಮೂರ್ತಿ, ಮಹಾಸಭಾದ ಉಪಾಧ್ಯಕ್ಷ ಎಂ.ಪಿ.ಆನAದ್ ಮೂರ್ತಿ, ಅಕ್ಕಮಹಾದೇವಿ, ಪಿ.ಎಚ್.ರುದ್ರಮುನಿ, ಲಿಂಗರಾಜು, ಪಾಲಾಕ್ಷಪ್ಪ, ಬಸವನಗೌಡ, ಉಷಾ, ಮಲ್ಲಿಕಾರ್ಜುನ್, ಚಂದ್ರಶೇಖರ್, ಶಿವಣ್ಣ, ವೀರಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಿಗಮ ಸ್ಥಾಪನೆಗೆ ಗ್ರೀನ್ ಸಿಗ್ನಲ್: https://www.suddikanaja.com/2020/11/17/veerashaiva-lingayat-development-corporation/