ಸುದ್ದಿ ಕಣಜ.ಕಾಂ
ಬೆಂಗಳೂರು: ಚಳಿಗಾಲದಲ್ಲಿ ಕೋವಿಡ್ ಎರಡನೇ ಅಲೆಯ ಭೀತಿಯಿಂದಾಗಿ ಶಾಲೆ ಮತ್ತು ಕಾಲೇಜು ಪುನರಾರಂಭದ ಮುಹೂರ್ತ ಮುಂದೂಡಲಾಗಿದೆ.
1 ರಿಂದ ಪದವಿ ಪೂರ್ವ ಕಾಲೇಜುಗಳ ಪುನರಾರಂಭದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಡಿಸೆಂಬರ್ ಅಂತ್ಯದವರೆಗೆ ಶಾಲೆ, ಕಾಲೇಜು ಪುನರಾರಂಭ ಮಾಡದಂತೆ ನಿರ್ಧರಿಸಲಾಗಿದೆ.
ಹಾಗಂತ ಹೊಸ ವರ್ಷಕ್ಕೆ ಆರಂಭ ಆಗಬಹುದು ಎಂಬ ನಿರೀಕ್ಷೆಯೂ ಇಲ್ಲ. ಕಾರಣ, ಡಿಸೆಂಬರ್ ಕೊನೆಯ ವಾರದಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಲು ತಜ್ಞರ ಸಭೆಯನ್ನು ಕರೆಯಲಾಗಿದೆ. ಆಗಿನ ಸ್ಥಿತಿಯನ್ನು ಅವಲೋಕಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ, ಈಗಲೂ ಶಾಲೆ, ಕಾಲೇಜು ಪುನರಾರಂಭದ ಬಗ್ಗೆ ಸರ್ಕಾರ ಇನ್ನೂ ಸ್ಪಷ್ಟ ನಿರ್ಣಯಕ್ಕೆ ಬಂದಿಲ್ಲ.