ಸುದದ್ದಿ ಕಣಜ.ಕಾಂ
ಶಿವಮೊಗ್ಗ: ಸೇಂಟ್ ಟಿ.ಎಲ್. ವಾಸ್ವಾನಿ ಜನ್ಮ ದಿನದ ಪ್ರಯುಕ್ತ ನಗರ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಆದೇಶಿಸಿದ್ದಾರೆ.
ಮಾಂಸ ಮಾರಾಟದ ಮಾಲೀಕರು ಅಂದು ಉದ್ದಿಮೆಯನ್ನು ಒಂದು ದಿನ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ. ಒಂದುವೇಳೆ, ಆದೇಶ ಉಲ್ಲಂಘಿಸಿ, ಮಾಂಸ ಮಾರಾಟ ಮಾಡಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.