ಸುದ್ದಿ ಕಣಜ.ಕಾಂ
ಶಿವಮೊಗ್ಗ: ಇಂದಿರಾ ಗಾಂಧಿ ರಸ್ತೆಯಲ್ಲಿ ಕಳೆದ ಎರಡು ವಾರಗಳಿಂದ ಚರಂಡಿ ಕಾಮಗಾರಿ ಮಾಡಲಾಗುತ್ತಿದೆ. ಇದು ಸಾರ್ವಜನಿಕರ ಓಡಾಟಕ್ಕೆ ಮುಖ್ಯರಸ್ತೆಯಾಗಿದ್ದು, ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸದೇ ಮಂದಗತಿಯ ಕೆಲಸ ಸಾಗಿದೆ. ಹೀಗಾಗಿ, ನಿತ್ಯ ವಾಹನ ಸವಾರರು ಸಂಕಷ್ಟ ಪಡುತ್ತಿದ್ದಾರೆ.
ಫಲಕವೂ ಅಳವಡಿಸಲ್ಲ: ಕಾಮಗಾರಿ ನಡೆಯುತ್ತಿರುವ ಜಾಗದಲ್ಲಿ ಸಾರ್ವಜನಿಕರ ಅನುಕೂಲ ಮತ್ತು ಸುರಕ್ಷತೆ ದೃಷ್ಟಿಕೋನದಿಂದ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಫಲಕ ಅಳವಡಿಸಬೇಕು. ಆದರೆ, ಇಲ್ಲಿ ಕೆಲಸ ನಡೆಯುತ್ತಿರುವ ಜಾಗದಲ್ಲಿ ಮಾತ್ರ ರಸ್ತೆ ಅಡ್ಡಲಾಗಿ ಕಲ್ಲುಗಳನ್ನು ಮಾತ್ರ ಹಾಕಲಾಗುತ್ತಿದೆ. ಇದರಿಂದ ಒಂದೋ ಆ ರಸ್ತೆಯಲ್ಲಿ ಬಂದ ವಾಹನಗಳು ವಾಪಸ್ ಹೋಗಲಾಗದೇ ಗಂಟೆಗಟ್ಟಲೇ ಸಂಚಾರ ವ್ಯತ್ಯಯವಾಗುತ್ತಿದೆ. ಇನ್ನೊಂದೆಡೆ ರಾತ್ರಿ ಹೊತ್ತಲ್ಲಿ ವಾಹನ ಸವಾರರು ಗುಂಡಿಯಲ್ಲಿ ಬೀಳುವ ಭೀತಿ ಇದೆ. ಅದೂ ರಸ್ತೆಯ ತಿರುವಿನಲ್ಲೇ ಕೆಲಸ ಮಾಡುತ್ತಿರುವುದರಿಂದ ಅಪಘಾತವಾಗುವ ಸಾಧ್ಯತೆ ಇದೆ. ಹೀಗಾಗಿ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಆದ್ಯತೆ ಮೇರೆಗೆ ಕೆಲಸ ಮುಗಿಸಬೇಕು.
– ಶರತ್, ಶಿವಮೊಗ್ಗ ನಿವಾಸಿ