ಹುಂಡಿಗೆ ಕನ್ನ, ಸೊರಬದ ವ್ಯಕ್ತಿಯೇ ಕಿಂಗ್ ಪಿನ್

 

 

ಸುದ್ದಿ ಕಣಜ.ಕಾಂ
ಬೀರೂರು: ದೇವಸ್ಥಾನದ ಹುಂಡಿಗೆ ಕೈಹಾಕಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಯಗಟಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ 3 ಲಕ್ಷ ರೂಪಾಯಿಗೂ ಅಧಿಕ ಹಣ ಕಳವು ಮಾಡಿ ಪರಾರಿಯಾಗಿದ್ದ ಇವರನ್ನು ಬಂಧಿಸಿ, ಕಳವು ಮಾಡಿದ್ದ ಹಣ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್ ವಶಕ್ಕೆ ಪಡೆಯಲಾಗಿದೆ.
ಸೊರಬ ತಾಲೂಕು ಬಿಳವಾಣಿ ಗ್ರಾಮದ ಶಶಿಧರ್ ಎಂಬಾತನನ್ನು ಹೊಸದುರ್ಗದಲ್ಲಿ ವಶಕ್ಕೆ ಪಡೆಯಲಾಗಿದೆ. ಈತ ಗಾರೆ ಕೆಲಸ ಮಾಡಿಕೊಂಡಿದ್ದ. ತನ್ನ ನಾಲ್ವರು ಸೇರಿತರೊಂದಿಗೆ ಸೇರಿ ದೇವಸ್ಥಾನದ ಹುಂಡಿಗೆ ಕನ್ನ ಹಾಕಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಈತನ ಪಾಲಿಗೆ 80 ಸಾವಿರ ಹಾಗೂ ಇನ್ನುಳಿದವರಿಗೆ 23,780 ರೂ. ನೀಡಿರುವುದಾಗಿಯೂ ತಿಳಿಸಿದ್ದಾನೆ.
ಹೊಸದುರ್ಗ ತಾಲೂಕಿನ ಗಂಜಿಗೆರೆ ಗ್ರಾಮದ ಮಂಜಪ್ಪ, ಲೋಕೇಶ್, ವೆಂಕಟೇಶ್, ರಂಗ ಎಂಬುವವರನ್ನು ತುಮಕೂರು ಜಿಲ್ಲೆಯಲ್ಲಿ ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!