ಕಾಲೇಜು ಪುನಾರಂಭ ಬೆನ್ನಲ್ಲೇ ಆಘಾತದ ಸುದ್ದಿ, 28 ವಿದ್ಯಾರ್ಥಿಗಳಿಗೆ ಕೊರೊನಾ, ಭದ್ರಾವತಿ, ಶಿವಮೊಗ್ಗದಲ್ಲೇ ಹೆಚ್ಚು ಕೇಸ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ:  ಡಿಪ್ಲೋಮಾ, ಎಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ತಗರತಿಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ತೋರಿದೆ. ಅದರ ಬೆನ್ನಲ್ಲೇ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ. ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಬೇಕೆಂಬ ನಿಯಮ ವಿಧಿಸಿದ್ದರಿಂದ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಲಾಗಿ 28 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಶಿವಮೊಗ್ಗ ತಾಲೂಕಿನಲ್ಲಿ 18, ಭದ್ರಾವತಿಯಲ್ಲಿ 8, ಸಾಗರದಲ್ಲಿ 2 ಇನ್ನುಳಿದಂತೆ, ತೀರ್ಥಹಳ್ಳಿ, ಹೊಸನಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ.
ಇದುವರೆಗೆ 6750 ವಿದ್ಯಾರ್ಥಿಗಳು ಹಾಗೂ 1650 ಸಿಬ್ಬಂದಿಯ ಗಂಟಲು ದ್ರವ ಸಂಗ್ರಹಿಸಲಾಗಿದೆ. ಅದರಲ್ಲಿ 28 ವಿದ್ಯಾರ್ಥಿಗಳಿಗೆ ಪಾಸಿಟಿವ್ ಸೋಂಕು ತಗಲಿರುವುದು ದೃಢಪಟ್ಟಿದೆ.

Leave a Reply

Your email address will not be published. Required fields are marked *

error: Content is protected !!