ತೀರ್ಥಹಳ್ಳಿ-ಕುಂದಾಪುರ ಹೆದ್ದಾರಿಯಲ್ಲಿ ತಡೆಗೋಡೆ ನಿರ್ಮಾಣ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ತಡೆಗೆ ತಡೆಗೋಡೆಗಳನ್ನು ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೆದ್ದಾರಿಯಲ್ಲಿನ ಸರಪಳಿ 42.75 ಕಿ.ಮೀ.ನಲ್ಲಿ ಬಾಳೆಬರೆ ಘಾಟ್ ರಸ್ತೆಯಲ್ಲಿರುವ ಅಪಾಯಕಾರಿ ತಿರುವಿನಲ್ಲಿ ತುರ್ತಾಗಿ ಸುರಕ್ಷತಾ ಕ್ರಮವಾಗಿ ತಡೆಗೋಡೆ ಕಾಮಗಾರಿ ಕೈಗೊಳ್ಳಬೇಕು.
ಕಾಮಗಾರಿಗೆ ಈಗಾಗಲೇ ಅನುಮೋದನೆ ದೊರೆತಿದ್ದು, ಯನ್ನು ಸಹ ನೀಡಲಾಗಿದೆ. ಈ ರಸ್ತೆ ಭಾಗದ ಪ್ರದೇಶ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಅಗತ್ಯ ಅನುಮೋದನೆಯನ್ನು ಪಡೆದುಕೊಂಡು ಕಾಮಗಾರಿಯನ್ನು ಆದಷ್ಟು ಬೇಗನೆ ಆರಂಭಿಸುವಂತೆ ಸೂಚಿಸಿದರು.

Leave a Reply

Your email address will not be published. Required fields are marked *

error: Content is protected !!