ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸೋಂಕಿನ ಆರ್ಭಟ ಮುಂದುವರಿದಿದೆ. ಭಾನುವಾರ 5 ತಾಲೂಕುಗಳಲ್ಲಿ ಒಟ್ಟು 20 ಪ್ರಕರಣ ದೃಢಪಟ್ಟಿದ್ದು, 32 ಜನ ಗುಣಮುಖರಾಗಿದ್ದಾರೆ. ಇಂದು ಯಾವುದೇ ಸಾವು ಸಂಭವಿಸಿಲ್ಲ. ಇದುವರೆಗೆ 348 ಜನರನ್ನು ಕೊರೊನಾ ಬಲಿ ಪಡೆದಿದೆ.
434 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪರೀಕ್ಷೆ ಬಳಿಕ 2319 ಜನರ ವರದಿ ನೆಗೆಟಿವ್ ಬಂದಿದೆ. ಆರೋಗ್ಯದ ಸಮಸ್ಯೆ ಹೊಂದಿರುವವರಿಗೆ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ದಾಖಲಿಸಿದ್ದು, ಇಂತಹವರ ಸಂಖ್ಯೆ 63 ಇದೆ. ಅದೇ ರೀತಿ ಖಾಸಗಿ ಆಸ್ಪತ್ರೆಯಲ್ಲಿ 14 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. 48 ಮಂದಿ ಮನೆ ಆರೈಕೆಯಲ್ಲಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 125 ಇದ್ದು, ದಿನೇ ದಿನೆ ಕಡಿಮೆಯಾಗುತ್ತಿದೆ.
ತಾಲೂಕುವಾರು ವರದಿ: ಶಿವಮೊಗ್ಗದಲ್ಲಿ 15, ಭದ್ರಾವತಿ 1, ಶಿಕಾರಿಪುರ 0, ತೀರ್ಥಹಳ್ಳಿ 1, ಸೊರಬ 0, ಸಾಗರ 1, ಹೊಸನಗರ 2 ಪ್ರಕರಣಗಳು ಪತ್ತೆಯಾಗಿವೆ.