ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಶಾಲೆಗಳ ಆರಂಭಕ್ಕೆ ಸರ್ಕಾರ ಹಸಿರು ನಿಶಾನೆ ತೋರಿರಲಿಲ್ಲ. ಆದರೀಗ, ಸೋಂಕು ಇಳಿಮುಖವಾಗಿದ್ದು, ಬರುವ ಡಿಸೆಂಬರ್’ನಿಂದ ಶಾಲೆ ಪುನಾರಂಭವಾಗುವ ಸಾಧ್ಯತೆ ಇದೆ.
ಈ ಬಗ್ಗೆ ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಡಿಡಿಪಿಐ ಎನ್.ಎಂ ರಮೇಶ್ ಅವರು ಈ ಬಗ್ಗೆ ಮಾಹಿತಿ ನೀಡಿದರು.
ಪ್ರೌಢ ಶಾಲೆ ಆರಂಭಿಸುವ ಕುರಿತಾಗಿ ವಿವಿಧ ಹಂತಗಳಲ್ಲಿ ಈಗಾಗಲೇ ಚರ್ಚೆ ನಡೆದಿದೆ. ಡಿಸೆಂಬರ್ ತಿಂಗಳಿನಿಂದ ಪ್ರಕ್ರಿಯೆ ಮುಗಿದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ದಾಖಲಾತಿಯಲ್ಲಿ ಶೇ.100ರಷ್ಟು ಹೆಚ್ಚಳ ಉಂಟಾಗಿದೆ ಎಂದು ಹೇಳಿದರು.