ಸುದ್ದಿ ಕಣಜ.ಕಾಂ
ಬೆoಗಳೂರು: ಲವ್ ಜಿಹಾದ್ ತಡೆಯುವುದಕ್ಕಾಗಿ ರಾಜ್ಯ ಸರ್ಕಾರ ಹೊಸ ಕಾನೂನು ತರಲು ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿರುವ ಇದನ್ನು ತಡೆಯಲು ಯಾವ ರೀತಿಯ ಕಾನೂನು ಅಳವಡಿಸಿಕೊಂಡಿದ್ದಾರೆ. ಅವುಗಳ ಸಾಧಕ ಬಾಧಕಗಳೇನು ಇತ್ಯಾದಿ ವಿಷಯಗಳ ಬಗ್ಗೆ ಅಧ್ಯಯನ ಮಾಡುವ ಚಿಂತನೆ ನಡೆದಿದೆ.
ಈ ಬಗ್ಗೆ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡಲಾಗುತ್ತಿದೆ. ಇದಕ್ಕಾಗಿ ಯುವಪೀಳಿಗೆಗಳನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಹೇಳಿದರು.
ಲವ್ ಜಿಹಾದ್ ಹೆಸರಿನಲ್ಲಿ ಮತಾಂತರವಾದರೆ ಕಾನೂನಿನ ಮಾನ್ಯತೆ ಇಲ್ಲ ಹಾಗೂ ಈ ರೀತಿ ಪರಿವರ್ತನೆ ಆಗುವುದು ಸರಿಯಲ್ಲ ಎಂದು ಅಲಹಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಬೊಮ್ಮಾಯಿ ತಿಳಿಸಿದರು.
ಸಲಹೆ, ಸೂಚನೆ ಪಡೆಯಲಾಗುವುದು:
ಜನರು ಕಾನೂನು ಜಾರಿಯ ಬಗ್ಗೆ ಏನು ಹೇಳುತ್ತಾರೆ. ಅದರಿಂದ ಆಗಬಹುದಾದ ಸಾಧಕ, ಬಾಧಕಗಳೇನು ಇತ್ಯಾದಿ ವಿಚಾರಗಳ ಬಗ್ಗೆ ಸಾರ್ವಜನಿಕರ ಸಲಹೆ ಸೂಚನೆ ಪಡೆಯಲಾಗುವುದು. ಇವೆಲ್ಲವುಗಳನ್ನು ಚರ್ಚಿಸಿ ತ್ವರಿತವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.