ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶೋಕಿ ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಕಳ್ಳತನ ಮಾಡುತ್ತಿದ್ದ ಇಬ್ಬರು ಈಗ ಪೊಲೀಸರ ಅತಿಥಿಯಾಗಿದ್ದಾರೆ.
ಹಣಕ್ಕಾಗಿ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾದ ಈ ಯುವಕರನ್ನು ಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
* ಬಂಧಿತರು: ಟಿಪ್ಪು ನಗರದ ಮಹಮ್ಮದ್ ಶಾರೂಕ್(22) ಮತ್ತು ತೌಫೀಕ್ ಅಹ್ಮದ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಅವರಿಂದ ಅಂದಾಜು 29,240 ರೂ. ಮೌಲ್ಯದ ಎರಡು ಮೊಬೈಲ್, ಕಳವು ಮಾಡಿದ್ದ 45 ಸಾವಿರ ರೂ. ಮೊತ್ತದ ಒಂದು ದ್ವಿಚಕ್ರ ವಾಹನ ದಸ್ತಗಿರಿ ಮಾಡಲಾಗಿದೆ.
ಆರೋಪಿಗಳ ಮೇಲೆ ಈ ಹಿಂದೆ ಯಾವುದೇ ರೀತಿಯ ಕಳ್ಳತನದ ಪ್ರಕರಣಗಳು ದಾಖಲಾಗಿಲ್ಲ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನವೆಂಬರ್ 7ರಂದು ದಾಖಲಾದ ಮೊಬೈಲ್ ಕಿತ್ತುಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬAಧಿಸಿದAತೆ ದೂರು ದಾಖಲಾಗಿತ್ತು.