ಸುದ್ದಿ ಕಣಜ.ಕಾಂ
ಸಾಗರ: ವ್ಯಕ್ತಿಯೊಬ್ಬರು ಅಕ್ರಮವಾಗಿ ಮನೆಯ ಟೇರಸ್ ಮೆಟ್ಟಿಲುಗಳ ಮೇಲೆ ಸಂಗ್ರಹಿಸಿಟ್ಟಿದ್ದ ಅಂದಾಜು 5 ಲಕ್ಷ ರೂ. ಬೆಲೆ ಬಾಳುವ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಸಾಗರದ ಎಸ್.ಎನ್. ನಗರದಲ್ಲಿ ಘಟನೆ ನಡೆದಿದ್ದು, ಶ್ರೀಗಂಧದ ಮರದ ತುಂಡುಗಳನ್ನು ಸಂಗ್ರಹಿಸಿಟ್ಟಿದ್ದ. ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಸ್ಥಳಕ್ಕೆ ದಾಳಿ ನಡೆಸಿ ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.
* ಯಾರು ಬಂಧಿತ: ಎಸ್.ಎನ್. ನಗರದ ಮಂಜುನಾಥ್ ಎಂಬುವವನಿಗೆ ಬಂಧಿಸಿ ಅರಣ್ಯ ಇಲಾಖೆ ಸುಪರ್ದಿಗೆ ವಹಿಸಲಾಗಿದೆ. ಪೊಲೀಸ್ ಅರಣ್ಯ ಸಂಚಾರಿ ದಳದ ಸಬ್ ಇನ್’ಸ್ಪೆಕ್ಟರ್ ಬಿ. ಮಲ್ಲಿಕಾರ್ಜುನ್, ಸಿಬ್ಬಂದಿ ರತ್ನಾಕರ್, ಗಿರೀಶ್, ರಂಗನಾಥ್ ಇತರರು ಕಾರ್ಯಾಚರಣೆ ನಡೆಸಿದ್ದರು.