ಸುದ್ದಿ ಕಣಜ.ಕಾಂ
ಶಿವಮೊಗ್ಗ: ಟ್ರೇಡ್ ಲೈಸೆನ್ಸ್ ರದ್ದತಿಗಾಗಿ ಲಂಚ ಪಡೆದು ಇನ್ನುಳಿದ 5 ಸಾವಿರ ಹಣ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಯೊಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದ ಎಪಿಎಂಸಿ ಯಾರ್ಡ್ ನಲ್ಲಿರುವ ಕೃಷಿ ಮಾರಾಟ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಸುಪರಿಟೆಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಾಮ್ಯ ನಾಯ್ಕ(51) ಎಂಬಾತನೇ ಎಸಿಬಿ ಬಲೆಗೆ ಬಿದ್ದ ವ್ಯಕ್ತಿ.
ಟ್ರೇಡ್ ಲೈಸೆನ್ಸ್ ರದ್ದತಿಗಾಗಿ ಉಮಾಮಹೇಶ್ ಎಂಬುವವರಿಗೆ 10 ಸಾವಿರ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ. ಇವರು ನೀಡಿದ ದೂರಿನನ್ವಯ ಬಲೆ ಬೀಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ.