ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹಲ್ಲೆಗೊಳಗಾದ ಬಜರಂಗ ದಳದ ಸಹ ಸಂಚಾಲಕ ನಾಗೇಶ್ ಅವರಿಗೆ ಪೂರ್ವ ವಲಯದ ಐಜಿಪಿ ಎಸ್.ರವಿ ಶುಕ್ರವಾರ ಭೇಟಿ ನೀಡಿ ಹೇಳಿಕೆ ಪಡೆದಿದ್ದಾರೆ.
ನಾಗೇಶ್ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಕಿದ್ದರಿಂದ ಯಾರೆಂದು ಗೊತ್ತಾಗಿಲ್ಲ. ಆದರೆ, ಎದುರುಗಡೆ ಬಂದರೆ ಖಂಡಿತ ಗುರುತು ಹಿಡಿಯುವುದಾಗಿ ನಾಗೇಶ್ ಹೇಳಿದ್ದಾರೆಂದು ರವಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.