ಸುದ್ದಿ ಕಣಜ.ಕಾಂ
ಶಿವಮೊಗ್ಗ: ಔಷಧಿಗಳನ್ನು ಉದ್ದೀಪನವಾಗಿ ಬಳಸುವುದನ್ನು ತಡೆಯಲು ಫಾರ್ಮಸಿಸ್ಟ್ ಜೊತೆಯಲ್ಲಿ ಸಭೆ ನಡೆಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗುವುದು ಎಂದು
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
ಶಿವಮೊಗ್ಗದಲ್ಲಿ ಬಾಲಕಿಯ ಮೇಲೆ ನಡೀತು ಸಾಮೂಹಿಕ ಅತ್ಯಾಚಾರ
ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿ, ನಗರದಲ್ಲಿ ಗಾಂಜಾ ಪ್ರಭಾವದಿಂದ ಹಲವಾರು ಅಪರಾಧ ಕೃತ್ಯಗಳು ಸಂಭವಿಸುತ್ತಿವೆ. ಇದನ್ನು ಸಹ ಬರುವ ದಿನಗಳಲ್ಲಿ ಕಟ್ಟುನಿಟ್ಟಾಗಿ ನಿಯಂತ್ರಿಸಲು ಕ್ರಮಕ್ಕೆ ಸೂಚಿಸಲಾಗುವುದು ಎಂದು ತಿಳಿಸಿದರು.
ಗ್ಯಾಂಗ್ ರೇಪ್ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್
ಇತ್ತೀಚೆಗೆ ನಗರದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಪೋಕ್ಸೋ ಕಾಯ್ದೆ ದಾಖಲಿಸಿದ್ದು, ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದರು.