ಸುದ್ದಿ ಕಣಜ.ಕಾಂ
ಶಿವಮೊಗ್ಗ: ವೈಯಕ್ತಿಕವಾಗಿ ನಡೆಯುವ ಘಟನೆಗಳನ್ನು ಸಾಮುದಾಯಿಕವಾಗಿ ನೋಡುವುದರಿಂದ ಪರಿಸ್ಥಿತಿ ಬಿಗಡಾಯಿಸು ಸಾಧ್ಯತೆ ಇರುತ್ತದೆ. ಹೀಗಾಗಿ, ಇಂತಹದ್ದಕ್ಕೆ ಯಾರೂ ಆಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮನವಿ ಮಾಡಿದರು.
ಜಿಲ್ಲಾಡಳಿತ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಶಾಂತಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಿಷೇಧಾಜ್ಞೆ ಮತ್ತೆ ಮುಂದೂಡಿಕೆ, ಎಲ್ಲಿಯವರೆಗೆ ಇರಲಿದೆ 144, ಕರ್ಫ್ಯೂನಲ್ಲಿಯೂ ಸಡಿಲಿಕೆ
ಅನಪೇಕ್ಷಿತ ಘಟನೆಗಳಿಂದಾಗಿ ಕಳೆದ ಒಂದು ವಾರದಲ್ಲಿ ಆರ್ಥಿಕ ಚಟುವಟಿಕೆಗೆ ಹಿನ್ನಡೆಯಾಗಿದೆ. ಹೀಗಾಗಿ, ಮುಂದೆ ಇಂತಹ ಸಮಸ್ಯೆ ಉಲ್ಬಣ ಆಗದಂತೆ ಎಲ್ಲರೂ ಸಾಮರಸ್ಯದಿಂದ ಬಾಳುವ ವಾತಾವರಣವನ್ನು ನಿರ್ಮಿಸುವುದು ನಮ್ಮ ಆದ್ಯತೆಯಾಗಿದೆ. ನಗರದ ಇಮೇಜ್ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.
ಜನಮಾನಸದಲ್ಲಿ ಮನೆ ಮಾಡಿರುವ ಭಯವನ್ನು ಹೋಗಲಾಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಎಲ್ಲ ಕ್ರಮ ಕೈಗೊಂಡಿದೆ ಎಂದರು.
ಕಿಕ್’ಗಾಗಿ ಔಷಧಿಗಳ ಬಳಕೆ, ಡಿಸಿ ಹೇಳಿದ್ದೇನು?
ಈ ವೇಳೆ ಮಾತನಾಡಿದ ಸಾರ್ವಜನಿಕರು, ನಿಷೇಧಾಜ್ಞೆ ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಇದರಿಂದಾಗಿ ವ್ಯಾಪಾರಸ್ಥರಲ್ಲಿ ಗೊಂದಲ ಮನೆ ಮಾಡಿದೆ. ಭಾರಿ ತೊಂದರೆ ಆಗುತ್ತಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ಮಹಾನಗರ ಪಾಲಿಕೆ ಉಪ ಮೇಯರ್ ಸುರೇಖಾ ಮುರಳೀಧರ್ ಸಭೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ನಗರ ಜನರ ಸಹಕಾರದಿಂದಾಗಿ ಸಹಜ ಸ್ಥಿತಿಗೆ ಬರುತ್ತಿದೆ. ಮೊಹಲ್ಲಾ ಸಭೆ ಹೆಚ್ಚು ಪರಿಣಾಮಕಾರಿಯಾಗಿ ನಡೆಸಲು ಕ್ರಮ ವಹಿಸಲಾಗುವುದು. ಒಂದುವೇಳೆ, ಸಾರ್ವಜನಿಕರು ದೂರು ನೀಡಬೇಕಾದರೆ ನೇರವಾಗಿ ತಮ್ಮನ್ನು ಕಚೇರಿಗೆ ಬಂದು ಭೇಟಿ ನೀಡಬಹುದು. ಸಾರ್ವಜನಿಕರು ಸಾಧ್ಯವಾದಷ್ಟು ಅಧಿಕ ಸಂಖ್ಯೆಯಲ್ಲಿ ಸಂಖ್ಯೆಯಲ್ಲಿ ತಮ್ಮ ಮನೆ ಮುಂಭಾಗ ರಸ್ತೆಗೆ ಅಭಿಮುಖವಾಗಿ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು.
ಕೆ.ಎಂ.ಶಾಂತರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ