ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿರುವ ಕಾಯ್ದೆ ವಿರುದ್ಧ ವಿವಿಧ ಸಂಘಟನೆಗಳು ಮಂಗಳವಾರ ಪ್ರತಿಭಟನೆ ಮಾಡಿದವು.
ನೂತನ ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್ ಹಿನ್ನೆಲೆ ಪ್ರತಿಭಟನೆ ಮಾಡಲಾಯಿತು.
ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ಗಳಿಗೆ ತಿದ್ದುಪಡಿ ಮೂಲಕ ರೈತರಿಗೆ ಮರಣ ಶಾಸನ ಬರೆಯಲು ಹೊರಟಿದೆ. ಜತೆಗೆ, ನ್ಯಾಯ ಕೇಳಿದ್ದಕ್ಕೆ
ರೈತರ ಮೇಲೆ ಲಾಠಿ ಪ್ರಹಾರ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ರೈತ ಮುಖಂಡ ಕೆ.ಟಿ.ಗಂಗಾಧರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕೆ.ಪಿ.ಶ್ರೀಪಾಲ್, ಎಂ.ಗುರುಮೂರ್ತಿ, ಪ್ರೊ.ರಾಜೇಂದ್ರ ಚೆನ್ನಿ, ಮಾಲತೇಶ್ ಬೊಮ್ಮನಕಟ್ಟೆ, ಕಿರಣ್ ಕುಮಾರ್, ರವಿಹರಿಗೆ, ಲೋಕೇಶ್, ಹಾರೋಬೆನವಳ್ಳಿ ರಮೇಶ್, ಜಯರಾಮ್, ಕೆ.ಎಸ್.ರವಿ, ಚೈತನ್ಯ, ನಾಗೇಶನ್, ಟೀಕೋಜಿರಾವ್, ವಿಜಯ್ ಮುಂತಾದವರಿದ್ದರು.
ಸೂಗೂರಿನಲ್ಲಿ ಹೆದ್ದಾರಿ ತಡೆ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಸೂಗೂರು ಗ್ರಾಮದಲ್ಲಿ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು.
ರಾಜ್ಯ ಸಂಚಾಲಕ ವಸಂತ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಎಚ್.ಪಿ. ದಿನೇಶ್, ಮಾಜಿ ಶಾಸಕಿ ಶಾದರಾಪರ್ಯಾ ನಾಯ್ಕ, ಜಿ.ಮುನೇಶ್ವರಪ್ಪ ಹಲವರು ಉಪಸ್ಥಿತರಿದ್ದರು.