ಸುದ್ದಿ ಕಣಜ.ಕಾಂ
ಬೆಂಗಳೂರು: ಸರ್ಕಾರದ ಯೋಜನೆಯ ಹೆಸರಿನಲ್ಲಿ ಹಣ ಕೇಳಿದರೆ ಹುಷಾರ್. ಕಾರಣ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಯೋಜನೆಯ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಶ್ರೀನಗರ ನಿವಾಸಿ ಸುಶೀಲಾ ಎಂಬುವವರೇ ಮೋಸ ಹೋದ ಮಹಿಳೆ. ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿ ಸಾಲಕ್ಕೆ ಅರ್ಹರಾಗಿರುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯಿಂದ 1.52 ಲಕ್ಷ ರೂ. ಪಡೆದು ಮೋಸ ಮಾಡಿದ್ದಾನೆ.
ಭದ್ರಾವತಿಯಲ್ಲಿ ಚಿಕಿತ್ಸೆಗೆ ಬಂದಿದ್ದ ಯುವತಿ ಬಟ್ಟೆ ಬಿಚ್ಚುವಂತೆ ಹೇಳಿದ ವೈದ್ಯ, ಮುಂದೇನಾಯ್ತು?
ಸುಶೀಲಾ ಅವರ ಜನ್ ಧನ್ ದೂರವಾಣಿ ಸಂಖ್ಯೆಗೆ ಸಬ್ಸಿಡಿ ಸಾಲ ಪಡೆಯಬಹುದೆಂದು ಸಂದೇಶ ಬಂದಿತ್ತು. ಈ ಬಗ್ಗೆ ವಿಚಾರಿಸಲು ಸಂದೇಶದಲ್ಲಿದ್ದ ಸಂಖ್ಯೆಗೆ ಕರೆ ಮಾಡಿದ್ದಾರೆ. ಆಗ ಜನ್ ಧನ್ ಯೋಜನೆಯಡಿ ಸಾಲ ಪಡೆಯಲು ಅರ್ಹರಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಇದಕ್ಕೆ ಕೆಲವು ಶುಲ್ಕ ಪಾವತಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಅದರಂತೆ ಮಹಿಳೆ ಕೂಡ ಅವರ ಮಾತುಗಳನ್ನು ನಂಬಿ ಹಂತ ಹಂತವಾಗಿ 1.52 ಲಕ್ಷ ರೂ. ಪುತ್ರಿಯ ಖಾತೆಯಿಂದ ವರ್ಗಾಯಿಸಿದ್ದಾರೆ.
ಹಣ ಕೈಸೇರಿದ್ದೇ ಅಪರಿಚಿತ ವ್ಯಕ್ತಿ ಮೊಬೈಲ್ ಸಂಪರ್ಕಕ್ಕೆ ಸಿಕ್ಕಿಲ್ಲ. ಇದರಿಂದ ಅನುಮಾನಗೊಂಡ ಮಹಿಳೆ ದಕ್ಷಿಣ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.