ಸುದ್ದಿ ಕಣಜ.ಕಾಂ
ಶಿಕಾರಿಪುರ: ಉಚ್ಚ ನ್ಯಾಯಾಲಯದ ಆದೇಶ ಮತ್ತು ಸಂವಿಧಾನದ ಆಶಯದಂತೆ 6ರಿಂದ 14 ವಯೋಮಿತಿಯೊಳಗಿನ ಮಕ್ಕಳು 8 ವರ್ಷಗಳ ಶಾಲಾ ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕಾಗಿರುತ್ತದೆ.
ಸಂತ್ರಸ್ತ ಕುಟುಂಬ ಹಸನಾಯ್ತು, ಇದು ರಾಜ್ಯದಲ್ಲೇ ವಿಶಿಷ್ಟ ಪ್ರಕರಣ
ಸ್ಥಳೀಯ ಸಂಸ್ಥೆಗಳು 2020-21ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಕರೆತರಲು ಮತ್ತು ಮುಖ್ಯವಾಹಿನಿಗೆ ತರಲು ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಪುರಸಭೆಯಿಂದ ನಿಯೋಜಿಸಿದ ಸಮೀಕ್ಷಾಕಾರರು ಸಮೀಕ್ಷೆಗೆ ಪ್ರತಿ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮಕ್ಕಳ ಪಾಸ್ ಪೋರ್ಟ್ ಆಕಾರದ ಭಾವಚಿತ್ರ ಮತ್ತು ಇತರೆ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡುವಂತೆ ಶಿಕಾರಿಪುರ ಪಟ್ಟಣ ವ್ಯಾಪ್ತಿಯ ಸಮಸ್ತ ನಾಗರಿಕರಿಗೆ ಪುರಸಭಾ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.