ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊವೀಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಯುವಜನೋತ್ಸವ ಸಂಘಟಿಸಬೇಕು. ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಪಾಡಬೇಕೆಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು.
ಕೊರೊನಾ ರಿಪೋರ್ಟ್: ಶಿವಮೊಗ್ಗದಲ್ಲಿ 9 ಇನ್ನುಳಿದ ತಾಲೂಕಿನಲ್ಲಿ ಎಷ್ಟು ಪ್ರಕರಣ?
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಆಯೋಜಿಸುವ ಸಂಬಂಧ ಏರ್ಪಡಿಸಲಾಗಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ನೆಹರೂ ಯುವ ಕೇಂದ್ರ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗಲ್ಲಿ ಡಿಸೆಂಬರ್ 29ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಆಯೋಜಿಸಿದೆ.
ನಗರದ ಕುವೆಂಪು ರಂಗಮಂದಿರ ಹಾಗೂ ನೌಕರರ ಭವನದ ಸಮನಾಂತರ ವೇದಿಕೆಗಳಲ್ಲಿ ಯುವಜನೋತ್ಸವ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಯಾವ್ಯಾವ ಸ್ಪರ್ಧೆ: ಜಾನಪದ ನೃತ್ಯ ಮತ್ತು ಜಾನಪದ ಸಂಗೀತ ಗುಂಪು ಸ್ಪರ್ಧೆ, ವೈಯಕ್ತಿಕ ವಿಭಾಗದಲ್ಲಿ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಆಶುಭಾಷಣ, ಕರ್ನಾಟಕಿ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ವಾದ್ಯ(ಸಿತಾರ್, ಕೊಳಲು, ತಬಲಾ, ವೀಣಾ ಮತ್ತು ಮೃದಂಗ), ಹಾರ್ಮೋನಿಯಂ, ಗಿಟಾರ್, ಶಾಸ್ತ್ರೀಯ ನೃತ್ಯ(ಮಣಿಪುರಿ, ಒಡಿಸ್ಸಿ, ಕಥಕ್, ಕೂಚುಪುಡಿ, ಭರತನಾಟ್ಯ) ಸ್ಪರ್ಧೆಗಳು ನಡೆಯಲಿವೆ.
ಕಲಾವಿದರಿಗೆ ಧನಸಹಾಯ, ಅಂತಿಮ ದಿನಾಂಕ ತಿಳಿದುಕೊಳ್ಳಲು ಕ್ಲಿಕ್ಕಿಸಿ
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಡಿಎಚ್ಒ ಡಾ.ರಾಜೇಶ್ ಸುರಗೀಹಳ್ಳಿ, ನೆಹರೂ ಯುವ ಕೇಂದ್ರದ ಯುವ ಸಮನ್ವಯ ಅಧಿಕಾರಿ ಉಲ್ಲಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣ ಮುಂತಾದವರು ಉಪಸ್ಥಿತರಿದ್ದರು.
ಯುವಜನೋತ್ಸವದ ಯಶಸ್ವಿ ಅನುಷ್ಠಾನಕ್ಕೆ ನೆಹರೂ ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರ ಸೇವೆಯನ್ನು ಬಳಸಿಕೊಳ್ಳಲಾಗುವುದು.ಸ್ಪರ್ಧಾಳುಗಳು ನಿಗದಿಪಡಿಸಿದ ದಿನದಂದು ನಗರದ ಕುವೆಂಪು ರಂಗಮಂದಿರದಲ್ಲಿ ಆಗಮಿಸಿ ಕಾರ್ಯಕ್ರಮ ಆಯೋಜಕರಲ್ಲಿ ತಮ್ಮ ಹೆಸರು ನೋಂದಾಯಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಲಘು ಉಪಹಾರ ಹಾಗೂ ಅನ್ಯ ತಾಲೂಕಿನಿಂದ ಬರುವ ಸ್ಪರ್ಧಿಗಳಿಗೆ ವಾಸ್ತವ್ಯ ಪ್ರಯಾಣ ವೆಚ್ಚ ನೀಡಲಾಗುವುದು.
– ಮಂಜುನಾಥ್, ಜಿಲ್ಲಾ ಯುವಜನ ಕ್ರೀಡಾಧಿಕಾರಿ