ಸುದ್ದಿ ಕಣಜ.ಕಾಂ
ಶಿವಮೊಗ್ಗ/ಬೆಂಗಳೂರು: ಹೊಸ ವರ್ಷಕ್ಕೆ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸುವಂತೆ ಸರ್ಕಾರ ಸೂಚನೆ ನೀಡಿದೆ. ಆದರೆ, ಇದರೊಂದಿಗೆ ಹಲವು ನಿಯಮಗಳನ್ನು ರೂಪಿಸಿದೆ.
Click here | ಹೊಸ ವರ್ಷಾಚರಣೆಗೆ ಸರ್ಕಾರದ ರೂಲ್ಸ್
ಶಾಲೆಗೆ ಬರುವ ಮಕ್ಕಳಿಗೆ ವಿಧಿಸಲಾದ ನಿಯಮಗಳಿವು
- ಶಾಲೆಗೆ ಬರುವ ಪ್ರತಿ ವಿದ್ಯಾರ್ಥಿಗಳು ತಮ್ಮ ಪೋಷಕರಿಂದ ಲಿಖಿತವಾಗಿ ಒಪ್ಪಿಗೆ ಪತ್ರವನ್ನು ತರಬೇಕು.
- ತರಗತಿ ನಡೆಯುವ ಅವಧಿಯಲ್ಲಿ ಕುಡಿಯುವ ನೀರು, ಲಘು ಆಹಾರವನ್ನು ಮಕ್ಕಳು ತಮ್ಮೊಂದಿಗೆ ತರಬೇಕು.
ಶಾಲಾ ಆಡಳಿತ ಮಂಡಳಿಗೆ ಸೂಚನೆ
- ಮಕ್ಕಳಿಗೆ ಅಗತ್ಯವೆನಿಸಿದಲ್ಲಿ ಶಾಲೆಯಲ್ಲಿ ಕುಡಿಯಲು ಬಿಸಿನೀರನ್ನು ಕಾಯಿಸಿ ಕೊಡಲು ಶಾಲಾ ಆಡಳಿತ ಮಂಡಳಿ ಕ್ರಮವಹಿಸಬೇಕು
- ಎಲ್ಲ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯ ಶಾಲೆಗಳ ಭೌತಿಕ ಸ್ಥಿತಿ-ಗತಿಗಳ ಬಗ್ಗೆ ವಿಶೇಷ ಗಮನಹರಿಸಬೇಕು
- ಕುಡಿಯುವ ನೀರು, ಶೌಚಾಲಯ, ಶಾಲಾ ಸ್ವಚ್ಛತೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು.
- ಶಾಲಾ ಆರಂಭಕ್ಕೂ ಮುನ್ನ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಶಾಲಾ ಕಟ್ಟಡ, ವಾಹನಗಳನ್ನು ಸ್ಯಾನಿಟೈಸ್ ಮಾಡಬೇಕು
- ಪ್ರತಿದಿನ ಬೆಳಗಿನ 3 ಅವಧಿಯಲ್ಲಿ ಎಸ್ಎಸ್ಎಲ್ಸಿ ತರಗತಿಗಳು ನಿರಂತರವಾಗಿ ನಡೆಸಬೇಕು.
- 6 ಮತ್ತು 7ನೇ ತರಗತಿಯ ಮಕ್ಕಳು ಬೆಳಗಿನ ಹಾಗೂ 8 ಮತ್ತು 9ನೇ ತರಗತಿಯ ಮಕ್ಕಳು ಮಧ್ಯಾಹ್ನದ ಅವಧಿಯಲ್ಲಿ ದಿನ ಬಿಟ್ಟು ದಿನ ನಡೆಯುವ ಶಾಲೆಗೆ ಬರಲು ಸೂಚಿಸಬೇಕು
- ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ನಿರ್ದೇಶನದಂತೆ ಯೋಗ ತರಗತಿಗಳನ್ನು ನಡೆಸಬೇಕು.
- ಆನ್ಲೈನ್ ತರಗತಿಗಳನ್ನು ನಡೆಸಲು ಯಾವುದೇ ಆಕ್ಷೇಪಣೆ ಇರುವುದಿಲ್ಲ
- ಪ್ರತಿಯೊಬ್ಬ ಶಿಕ್ಷಕರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
ಸರ್ಕಾರದ ಮಾರ್ಗಸೂಚಿಯಂತೆ ಜನವರಿ 1ರಿಂದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ತರಗತಿಗಳು ಆರಂಭಗೊಳ್ಳುತ್ತಿವೆ. ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲೆಗಳ ಮುಖ್ಯೋಪಾಧ್ಯಾಯರು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಹೊಂದಿರಬೇಕು.
– ಎಂ.ಎಲ್.ವೈಶಾಲಿ, ಸಿಇಒ, ಜಿಲ್ಲಾ ಪಂಚಾಯಿತಿ ಶಿವಮೊಗ್ಗ