ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ಏಕ ಕಾಲಕ್ಕೆ ಶಿವಮೊಗ್ಗ ಮತ್ತು ಭದ್ರಾವತಿಯ ನಾಲ್ಕು ಕಡೆ ಗುರುವಾರ ದಾಳಿ ನಡೆಸಿದ್ದಾರೆ.
ಹೊಸ ವರ್ಷಕ್ಕೆ ಶಾಲೆಗೆ ಬರುವಾಗ ಪೋಷಕರಿಂದ ಲಿಖಿತ ಪತ್ರ ತರಬೇಕು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಜಿ.ಜಿ.ಸುರೇಶ್ ಎಂಬುವವರ ಮನೆ, ಕಚೇರಿ ಮೇಲೆ ದಾಳಿ ಮಾಡಲಾಗಿದೆ.
ಎಲ್ಲೆಲ್ಲಿ ದಾಳಿ: ಮಲ್ಲೇಶ್ವರನಗರದಲ್ಲಿರುವ ಅವರ ಮನೆ, ಗೋಪಾಳಗೌಡ ಬಡಾವಣೆಯಲ್ಲಿರುವ ಮನೆ, ಭದ್ರಾವತಿ ತಾಲೂಕಿನ ಹುಣಸೇಕಟ್ಟೆಯಲ್ಲಿರುವ ತೋಟ ಮತ್ತು ತೋಟದ ಮನೆಯ ಮೇಲೆ ದಾಳಿ ಮಾಡಲಾಗಿದೆ. ಚಿನ್ನಾಭರಣ, ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
ಎಸಿಬಿ ಎಸ್ಪಿ ನೇತೃತ್ವದ ತಂಡ: ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ ಎಸಿಬಿ ಡಿಎಸ್ಪಿ ಜೆ.ಲೋಕೇಶ್, ಪಿಐ ವೀರೇಶ್ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ಏಕ ಕಾಲಕ್ಕೆ ದಾಳಿ ನಡೆಸಿದೆ.