ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಸವಳಂಗ ರಸ್ತೆಯಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.
ಕೋಟೆ ಪ್ರದೇಶ ವ್ಯಾಪ್ತಿಯ ದ್ವಿಚಕ್ರ ವಾಹನ ಸವಾರ ನಾಗರಾಜ್ (83) ಎಂಬುವವರು ಮೃತಪಟ್ಟಿದ್ದಾರೆ. ನೆಹರೂ ಸ್ಟೇಡಿಯಂ ರಸ್ತೆಯಿಂದ ಬರುತ್ತಿದ್ದ ಲಾರಿ ಹಾಗೂ ವಿನೋಬ ನಗರ ಕಡೆ ತೆರಳುವಾಗ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ನಾಗರಾಜ್ ಅವರ ತೊಡೆ ಮತ್ತು ಕಾಲಿನ ಮೇಲೆ ಲಾರಿ ಹತ್ತಿದ್ದು, ತೀವ್ರ ಗಾಯಗೊಂಡ ಪರಿಣಾಮ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಲಾರಿ ಚಾಲಕ ಮತ್ತು ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.