ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋಮು ಗಲಭೆಯಿಂದಾಗಿ ಶಿವಮೊಗ್ಗದಲ್ಲಿ ಡಿಸೆಂಬರ್ 3ರಿಂದ ನಿಷೇಧಾಜ್ಞೆ ಜಾರಿಯಲ್ಲಿದೆ. ಅಹಿತಕರ ಘಟನೆಗಳು ನಡೆಯಬಾರದೆಂಬ ಕಾರಣಕ್ಕೆ ಎಲ್ಲ ಅಂಗಡಿಗಳನ್ನು ಮಾಲೀಕರೇ ಬಂದ್ ಮಾಡಿ ಬೆಂಬಲಿಸಿದ್ದರು. ಆದರೆ, ಸೋಮವಾರವೂ ನಿಷೇಧಾಜ್ಞೆ ಮುಂದೂಡಿದ್ದರಿಂದ ವ್ಯಾಪಾರಸ್ಥರು ಅಂಗಡಿಗಳನ್ನು ತೆರೆದಿದ್ದರು. ಆದರೆ, ಬೆಳಗ್ಗೆ ಪೊಲೀಸರು ಧ್ವನಿವರ್ಧಕದ ಮೂಲಕ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚನೆ ನೀಡುತ್ತಿದ್ದರು. ಆಗ ದುರ್ಗಿಗುಡಿ ರಸ್ತೆಯಲ್ಲಿ ವ್ಯಾಪಾರಸ್ಥರು ಮತ್ತು ಪೊಲೀಸರ ಮಧ್ಯೆ ಕೆಲಹೊತ್ತು ಮಾತಿನ ಚಕಾಮಕಿ ನಡೆಯಿತು.
ವಿಡಿಯೋ ನ್ಯೂಸ್ ⇓