ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭದ್ರಾ ಕಾಲುವೆ ಮತ್ತು ನಾಲೆಯಲ್ಲಿ ತುಂಬಿರುವ ಹೂಳು ತೆಗೆಯಲು ಸೂಕ್ತ ಕ್ರಮಕ್ಕೆ ಮುಂದಾಗುವಂತೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಮನವಿ ಮಾಡಿದ್ದಾರೆ.
ಶನಿವಾರ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ ಅವರಿಗೆ ಭೇಟಿ ಮಾಡಿ ಈ ಬಗ್ಗೆ ಸುದೀರ್ಘ ಚರ್ಚಿಸಿದ್ದಾರೆ.
ನರೇಗಾ ಯೋಜನೆ ಅಡಿ ಕಾಲುವೆ, ನಾಲೆಯಲ್ಲಿ ತುಂಬಿರುವ ಹೂಳು ಹೊರ ತೆಗೆದಲ್ಲಿ ಅನುಕೂಲವಾಗಲಿದೆ. ಹೂಳಿನಿಂದಾಗಿ ಅಚ್ಚುಕಟ್ಟು ಭಾಗದ ರೈತರಿಗೆ ಸರಿಯಾಗಿ ನೀರು ತಲುಪುತಿಲ್ಲ. ಇದನ್ನೇ ನಂಬಿಕೊಂಡಿರುವ ಕೃಷಿಕ ವರ್ಗ ಸಂಕಷ್ಟದಲ್ಲಿದೆ. ಒಂದುವೇಳೆ, ಕಾಲುವೆ ಶುಚಿಗೊಳಿಸಿದ್ದಲ್ಲಿ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.
ಇದಕ್ಕೆ ಜಿಪಂ ಸಿಇಒ ವೈಶಾಲಿ ಅವರು ಸ್ಪಂದನೆ ನೀಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತ್ವರಿತವಾಗಿ ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವ ಭರವಸೆ ನೀಡಿದ್ದಾರೆ. ಒಂದುವೇಳೆ, ಭದ್ರಾ ಜಲಾಶಯದಿಂದ ಹರಿಸಲಾಗುವ ನೀರು ಕಾಲುವೆಯ ಮೂಲಕ ಸಕಾಲಕ್ಕೆ ರೈತರಿಗೆ ಸಿಕ್ಕರೆ ರೈತಾಪಿ ವರ್ಗಕ್ಕೆ ಅನುಕೂಲವಾಗಲಿದೆ.