ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಇದುವರೆಗೆ ಜಿಲ್ಲೆಯಲ್ಲಿ 130 ಸಕ್ರಿಯ ಪ್ರಕರಣಗಳು ಇವೆ.
ಗುರುವಾರ 14 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ, ಯಾವುದೇ ಸಾವು ಸಂಭವಿಸಿಲ್ಲ. ಕೋವಿಡ್ ನಿಂದ ಮೃತಪಡುವವರ ಸಂಖ್ಯೆ ಇಳಿಮುಖವಾಗಿದ್ದು, ಆಶಾದಾಯಕ ಬೆಳವಣಿಗೆಯಾಗಿದೆ. 12 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 348 ಜನರನ್ನು ಕೊರೊನಾ ಬಲಿ ಪಡೆದಿದೆ.
ತಾಲೂಕುವಾರು ವರದಿ: ಶಿವಮೊಗ್ಗ 2, ಭದ್ರಾವತಿ 2, ಶಿಕಾರಿಪುರ 1, ತೀರ್ಥಹಳ್ಳಿ 2, ಸೊರಬ 3, ಸಾಗರ 4, ಹೊಸನಗರ 0. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ 22, ಖಾಸಗಿ ಆಸ್ಪತ್ರೆಯಲ್ಲಿ 5, ಮನೆ ಆರೈಕೆಯಲ್ಲಿರುವವರು 103 ಜನರಿದ್ದಾರೆ.