ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬೊಮ್ಮನಕಟ್ಟೆ ಎಫ್ ಬ್ಲಾಕ್ನಲ್ಲಿ ಬುಧವಾರ ಬೆಳಗ್ಗೆಯಿಂದಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಒತ್ತುವರಿ ಮಾಡಲಾಗಿರುವ ಉದ್ಯಾನ, ಸಾರ್ವಜನಿಕ ಉಪಯೋಗಕ್ಕೆ ಪ್ರದೇಶ (ಸಿಎ ಸೈಟ್), ರಸ್ತೆಗಳನ್ನು ತೆರವುಗೊಳಿಸುವ ಕಾರ್ಯ ಸಾಗಿದೆ.
ಭೂ ಮಾಪನ ಇಲಾಖೆ ಉಪ ನಿರ್ದೇಶಕರು, ಭದ್ರಾವತಿ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ ಜಂಟಿ ಸಮೀಕ್ಷೆ ಬಳಿಕ ಅತಿಕ್ರಮಗೊಂಡಿರುವ ಪ್ರದೇಶಗಳನ್ನು ಗುರುತಿಸಲಾಗಿದೆ.
ಬೋಮ್ಮನಕಟ್ಟೆ ಆಶ್ರಯ ಬಡಾವಣೆ ಸಂಬಂಧಿಸಿದಂತೆ ಅತಿಕ್ರಮಣದ ಬಗ್ಗೆ ಸಾಕಷ್ಟು ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಪರಿಶೀಲಿಸುವುದಕ್ಕಾಗಿ ಜಿಲ್ಲಾಧಿಕಾರಿಗಳ ಸಮಿತಿ ರಚಿಸಿದ್ದರು. ಸಮಿತಿಯು ಸ್ಥಳ ಪರಿಶೀಲನೆ ಮತ್ತು ಸಮೀಕ್ಷೆ ಕೈಗೊಂಡಿದೆ. ಅದರನ್ವಯ ಮೊದಲ ಹಂತದಲ್ಲಿ ಸರ್ಕಾರದ ಜಮೀನು ಅತಿಕ್ರಮಣ ಮಾಡಿಕೊಂಡಿರುವ ಪ್ರದೇಶಗಳನ್ನು ತೆರವುಗೊಳಿಸಲಾಗುತ್ತಿದೆ.
30 ರಿಂದ 40 ಕಡೆಗಳಲ್ಲಿ ಸರ್ಕಾರಿ ಆಸ್ತಿಯನ್ನು ಅತಿಕ್ರಮಣ ಮಾಡಲಾಗಿದೆ. ಕೆಲವರು ಅಂತಹ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ, ಬೇಲಿ ಹಾಕಿಕೊಂಡಿದ್ದಾರೆ. ಅವುಗಳ ತೆರವು ಕಾರ್ಯ ಆರಂಭಗೊಂಡಿದೆ.