ಲೋಕಲ್‌ ಫೈಟ್, ಪಂಚರತ್ನ, ಕುಟುಂಬ ಮಿಲನ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಪ್ರತಿ ಗ್ರಾಪಂನ ವಾರ್ಡ್‌ಗಳಲ್ಲಿ ಕುಟುಂಬ ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜತೆಗೆ, ಪಂಚರತ್ನ ತಂಡವನ್ನು ರಚನೆ ಮಾಡಲಾಗಿದೆ. ಇದರ‌ ಮೂಲಕ ಎಲ್ಲ ವಾರ್ಡ್‌ ಗೂ ಭೇಟಿ ನೀಡಿ ಚುನಾವಣ ಸಿದ್ಧತೆ ಬಗ್ಗೆ ಸಲಹೆ ಸೂಚನೆ ನೀಡಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿಯಲ್ಲಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಿಜೆಪಿ ಸವಾಲಾಗಿ ಸ್ವೀಕರಿಸಿದೆ. ಜಿಲ್ಲೆಯ 275 ಗ್ರಾಮ ಪಂಚಾಯಿತಿಯ 2968 ವಾರ್ಡ್‌ಗಳಿದ್ದು, 263 ಗ್ರಾಮ ಪಂಚಾಯಿತಿಯ 2862 ವಾರ್ಡ್‌ಗಳಿಗೆ  ಮಾತ್ರ ಚುನಾವಣೆ ನಡೆಯಲಿದೆ. 2000ಕ್ಕೂ ಹೆಚ್ಚು ವಾರ್ಡ್‌ ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಈಗಾಗಲೇ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ ಎಂದು ಹೇಳಿದರು.
ಗ್ರಾಮ ಸ್ವರಾಜ್ ಸಮಾವೇಶ: ಡಿಸೆಂಬರ್ 2ರಂದು ಗ್ರಾಮ ಸ್ವರಾಜ್ ಸಮಾವೇಶ ಆಯೋಜಿಸಿದೆ. ಬೆಳಗ್ಗೆ 9ಕ್ಕೆ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆಗೆ ಮಾಲಾರ್ಪಣೆ, 11ಕ್ಕೆ ಪೆಸಿಟ್ ಕಾಲೇಜು ಸಭಾಂಗಣದಲ್ಲಿ ಸಮಾವೇಶ ಏರ್ಪಡಿಸಲಾಗಿದೆ. ಅಲ್ಲಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಸಿದ್ದೇಶ್ವರ್, ನಾರಾಯಣ್ ಸ್ವಾಮಿ ಮತ್ತಿತರರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಶಿಕಾರಿಪುರದ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕುಮದ್ವತಿ ಕಾಲೇಜಿನ ಸಭಾಂಗಣದಲ್ಲಿ ಸಮಾವೇಶ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಡಿ.ಎಸ್.ಅರುಣ್, ಶಿವರಾಜ್, ಬಿ.ಆರ್.ಮಧುಸೂದನ್, ಬಿ.ಕೆ.ಶ್ರೀನಾಥ್, ಎನ್.ಡಿ.ಸತೀಶ್, ಮಂಡೇನಕೊಪ್ಪ ಗಂಗಾಧರ್, ವಾಗೀಶ್, ಹರಿಕೃಷ್ಣ , ಕೆ.ವಿ.ಅಣ್ಣಪ್ಪ, ಧರ್ಮಪ್ರಸಾದ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!