ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮೇಲ್ಮನೆಯಲ್ಲಿ ಇತ್ತೀಚೆಗೆ ಘಟಿಸಿದ ಕೃತ್ಯದ ನೇರ ಕಾರಣ ಬಿಜೆಪಿ. ಇದರ ನೈತಿಕ ಹೊಣೆ ಹೊತ್ತು ಕಾನೂನು ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವರೂ ಆದ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದರು.
ಮಾಜಿ ಸೈನಿಕರಿಗೆ ಪೆಟ್ರೋಲ್ ಬಂಕ್ ತೆರೆಯಲು ಅವಕಾಶ, ಅರ್ಜಿ ಸಲ್ಲಿಸುವ ಕೊನೆ ದಿನ ಯಾವುದು?
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರತ್ನಾಕರ್ ಅವರು, ಈ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಕಪ್ಪು ಚುಕ್ಕೆಯಾಗಿದೆ. ವಿಧಾನ ಪರಿಷತ್ತಿನ ಸಭಾಪತಿಯನ್ನು ಕಲಾಪಕ್ಕೆ ಬಾರದ ಹಾಗೆ ಬಾಗಿಲು ಮುಚ್ಚಿ ತಡೆಯಲಾಗಿದೆ. ಅವರ ಅನುಮತಿ ಪಡೆಯದೇ ಉಪ ಸಭಾಪತಿಯನ್ನು ಸಭಾಪತಿ ಪೀಠದ ಮೇಲೆ ಕೂರಿಸಲಾಗಿದೆ. ಇದು ಸಂವಿಧಾನಕ್ಕೆ ಎಸಗಿರುವ ಅಪಚಾರ ಎಂದು ಟೀಕಿಸಿದರು.
ಕೋವಿಡ್ ಪರೀಕ್ಷೆಗಾಗಿ ಗಂಟೆಗಟ್ಟಲೇ ಕ್ಯೂ, ಕಾರಣವೇನು?
ಕಲಾಪದ ಮರ್ಯಾದೆಯನ್ನು ಕಾಪಾಡಬೇಕಾದ ಕಾನೂನು ಸಚಿವ ಮಾಧುಸ್ವಾಮಿ ಅವರೇ ಖುದ್ದು ಸಭಾಪತಿ ಪೀಠದಲ್ಲಿ ಉಪ ಸಭಾಪತಿಯನ್ನು ಕೂರಿಸಿದ್ದಲ್ಲದೇ ಸದನದಲ್ಲಿ ಮಾರ್ಷಲ್ಗಳಿಗೆ ಧಮುಕಿ ಕೂಡ ಹಾಕಿದ್ದಾರೆ ಎಂದು ಆರೋಪಿಸಿದರು.
ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಪ್ರಧಾನ ಕಾರ್ಯದರ್ಶಿ ಯು.ಶಿವಾನಂದ್, ಬಾಬು, ಪಾಲಿಕೆ ಪ್ರತಿಪಕ್ಷ ನಾಯಕ ಎಚ್.ಸಿ.ಯೋಗೇಶ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.