ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಹೊಸಹಳ್ಳಿ ಗ್ರಾಮದ ಅಡಿಕೆ ತೋಟದಲ್ಲಿ ಮತದಾರರಿಗೆ ನಾಜ್ ವೆಜ್ ಊಟದ ವ್ಯವಸ್ಥೆ ಮಾಡಿದ್ದ ಸ್ಥಳಕ್ಕೆ ಮಂಗಳವಾರ ಬೆಳಗ್ಗೆ ಮಾದರಿ ನೀತಿ ಸಂಹಿತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆ, ಎಲ್ಲೆಲ್ಲಿ ನಡೆಯಲಿದೆ ಮತ ಎಣಿಕೆ?
ಅಡಿಕೆ ತೋಟದಲ್ಲಿರುವ ಕೋಳಿ ಫಾರಂ ಇದ್ದು, ಅಲ್ಲಿ ಅಭ್ಯರ್ಥಿಯ ಪರ ಮತ ಚಲಾಯಿಸಿದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದಿದ್ದೇ ನೀತಿ ಸಂಹಿತೆ ಜಾರಿ ಅಧಿಕಾರಿ ಎನ್.ಚಂದ್ರಪ್ಪ, ಇಒ ಕಲ್ಲಪ್ಪ ದಾಳಿ ನಡೆಸಿದ್ದಾರೆ.
ಬಾಣಸಿಗ ವಶಕ್ಕೆ: ನೀತಿ ಸಂಹಿತೆ ಉಲ್ಲಂಘಿಸಿದ ಅಭ್ಯರ್ಥಿಯ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅಧಿಕಾರಿಗಳ ತಂಡ ದಾಳಿ ಮಾಡುತ್ತಿದ್ದಂತೆಯೇ ಸ್ಥಳದಲ್ಲಿದ್ದವರು ಪರಾರಿಯಾಗಿದ್ದಾರೆ. ಅಡುಗೆ ಮಾಡುವವ(ಬಾಣಸಿಗ)ನನ್ನು ಸಿಕ್ಕಿದ್ದು, ಆತನಿಗೆ ವಶಕ್ಕೆ ಪಡೆಯಲಾಗಿದೆ.