ಸುದ್ದಿ ಕಣಜ.ಕಾಂ
ಶಿವಮೊಗ್ಗ: ರೈತರ ಅನುಕೂಲಕ್ಕಾಗಿ ಬೆಂಬಲ ಬೆಲೆ ನೀಡಿ ಭತ್ತ ಖರೀದಿಸುವ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ರೈತರಿಂದ ಭತ್ತ ಖರೀದಿ ಮಾಡಲು ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ ಗರಿಷ್ಠ 75 ಕ್ವಿಂಟಾಲ್ ಭತ್ತ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಈ ಮುಂಚೆ ಪ್ರತಿ ಎಕರೆಗೆ 16 ಕ್ವಿಂಟಾಲ್ ನಿಂದ 40 ಕ್ವಿಂಟಾಲ್ ವರೆಗೆ ಖರೀದಿಸಲಾಗುತ್ತಿತ್ತು. ಈಗ ಖರೀದಿಯ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿದೆ. ಇದರ ಪ್ರಯೋಜನವನ್ನು ರೈತರು ಪಡೆಯಬೇಕೆಂದು ಪ್ರಟಕಣೆಯಲ್ಲಿ ತಿಳಿಸಿದ್ದಾರೆ