ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದಲ್ಲಿ ಇತ್ತೀಚೆಗೆ ನಡೆದ ಘಟನೆ ಕೋಮು ಗಲಭೆಯಲ್ಲ. ಅದರ ಹಿಂದೆ ರಾಜಕೀಯ ಹಸ್ತಕ್ಷೇಪವಿದೆ. ಚಿಕ್ಕದರಲ್ಲಿಯೇ ಇದನ್ನು ಚಿವುಟದೇ ಬಿಜೆಪಿ ನಾಯಕರು ದೊಡ್ಡದಾಗಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ.
ಈ ಸಂದರ್ಭದಲ್ಲಿ ಜನರಿಗೆ ಧೈರ್ಯ ತುಂಬುವುದನ್ನು ಬಿಟ್ಟು ಗಾಯದ ಮೇಲೆ ಉಪ್ಪು ಸುರಿಯುವ ಕೆಲಸ ಮಾಡಲಾಗುತ್ತಿದೆ. ಜನರನ್ನು ಭಯಕ್ಕೆ ದೂಡಲಾಗುತ್ತಿದೆ ಎಂದು ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದ್ದಾರೆ.