ಸುದ್ದಿ ಕಣಜ.ಕಾಂ
ಶಿವಮೊಗ್ಗ: ಖಾಸಗಿ ಕಂಪೆನಿಯೊಂದರ ಹೆಸರಿನಲ್ಲಿ ಕೆಲವರು ನ್ಯಾಯಾಲಯದ ಆದೇಶ ಇರದಿದ್ದರೂ ತುಂಗಾಭದ್ರಾ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾರ್ಮಿಕ ಮುಖಂಡ ಎನ್.ಟಿ. ರಂಗಪ್ಪ ಆರೋಪಿಸಿದರು.
ಭದ್ರಾ ಎಡನಾಲೆಗೆ ನೀರು ಬಿಡಲು ಕೇಳುತ್ತಿರುವುದೇಕೆ?
ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು 60 ಮನೆಗಳಿದ್ದು ಇಲ್ಲಿ ಕಾರ್ಮಿಕರು ವಾಸವಾಗಿದ್ದಾರೆ. ಅವರನ್ನು ಅಲ್ಲಿಂದ ಓಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು. ತಮಗೆ ರಕ್ಷಣೆ ನೀಡುವಂತೆ ಮತ್ತು ಮದ್ರಾಸ್ ಹೈಕೋರ್ಟ್ ತೀರ್ಪು ಬರುವವರೆಗೂ ಯಾವುದೇ ಚಟುವಟಿಕೆಗಳನ್ನು ಮಾಡಬಾರದು.
ಮಾಡುತ್ತಿದ್ದಾರೆ. ಇವರ ವಿರುದ್ದ ಕಾರ್ಮಿಕ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
700 ದಿನಗಳಲ್ಲಿ ಭಗವದ್ಗೀತೆಯ 700 ಶ್ಲೋಕ ಕಂಠಪಾಠ
ತುಂಗಭದ್ರಾ ಸಕ್ಕರೆ ಕಾರ್ಖಾನೆ ಕಾರ್ಮಿಕರಿಗೆ ಬರಬೇಕಾದ ಸೌಲಭ್ಯ ಕಲ್ಪಿಸಬೇಕು. ಕಾರ್ಖಾನೆ ಮುಚ್ಚಿದ ಬಳಿಕ ಅಂದಾಜು 850 ಕಾರ್ಮಿಕರು ಬೀದಿ ಪಾಲಾಗಿದ್ದರು. ಅದರಲ್ಲಿ 450 ಸಾವನ್ನಪ್ಪಿದ್ದಾರೆ ಎಂದರು.
ಮಾಧ್ಯಮಗೋಷ್ಠಿಯಲ್ಲಿ ಕಾರ್ಮಿಕ ಮುಖಂಡ ಎನ್.ಟಿ. ರಂಗಪ್ಪ, ಕಾನೂನು ಸಲಹೆಗಾರ ಸಚ್ಚಿದಾನಂದ ಜೋಷಿ, ಹಿರಿಯ ಕಾರ್ಮಿಕ ಕೆ.ರಾಘವನ್ ಮಾತನಾಡಿದರು. ಪ್ರಮುಖರಾದ ಎಚ್.ಪದ್ಮನಾಭ್, ರಾಮಲಾಲ್, ವಿನಾಯಕರಾವ್, ಯೂಸೂಫ್, ಲಿಂಗಾಚಾರ್, ಚಂದ್ರು, ಕಾರ್ತಿಕ್, ರುದ್ರಪ್ಪ, ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.