ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಪ್ರಶ್ನೆಯೇ ಇಲ್ಲ. ಇದನ್ನು ಪಕ್ಷದ ವರಿಷ್ಠರೂ ಸ್ಪಷ್ಟಪಡಿಸಿದ್ದಾರೆ. ಆದಾಗ್ಯೂ ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಗಾಗಿ ಶನಿವಾರ ಶಿವಮೊಗ್ಗಕ್ಕೆ ಆಗಮಿಸಿದ ಕಟೀಲ್ ಅವರಿಗೆ ಸಕ್ರೆಬೈಲು ಆನೆಬಿಡಾರದ ಬಳಿ ಪಕ್ಷದಿಂದ ಸ್ವಾಗತಿಸಲಾಯಿತು. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದರು.
ಕೊಳೆಗೇರಿ ನಿವಾಸಿಗಳಿಗೆ ಸಿಹಿ ಸುದ್ದಿ
ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಿರುವುದನ್ನು ನೋಡಿ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ಹೀಗಾಗಿಯೇ ಬಿಜೆಪಿಯ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿಯ ಕಾರ್ಯಕಾರಿ ಸಭೆಯು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುತ್ತದೆ. ಅದನ್ನು ಈ ಸಲ ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಇಲ್ಲಿ ಪಕ್ಷದ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗುವುದು ಎಂದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.