ಸುದ್ದಿ ಕಣಜ.ಕಾಂ
ಚಿತ್ರದುರ್ಗ: ಕೇಂದ್ರ ಸಚಿವ ಸದಾನಂದಗೌಡ ಅವರು ಅಸ್ವಸ್ಥರಾಗಿದ್ದ ಹಿನ್ನೆಲೆ ಚಿತ್ರದುರ್ಗದಿಂದ ಬೆಂಗಳೂರಿಗೆ ಜಿರೋ ಟ್ರಾಫಿಕ್ ಕರೆದುಕೊಂಡು ಹೋಗಲಾಗಿದೆ.
ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಚಿತ್ರದುರ್ಗಕ್ಕೆ ಹೋದಾಗ ನವೀನ್ ರೆಸಿಡೆನ್ಸಿ ಬಳಿ ಘಟನೆ ನಡೆದಿದೆ.
ಕಾರಿನಿಂದ ಇಳಿಯುವಾಗ ಲೋ ಶುಗರ್ನಿಂದಾಗಿ ಅವರು ಮೂರ್ಛೆ ಹೋಗಿದ್ದಾರೆ. ತಕ್ಷಣ ಅಂಗರಕ್ಷಕರು ಅವರನ್ನು ಎಸ್ಕಾರ್ಟ್ ವಾಹನದಲ್ಲಿಯೇ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಧಾರ
ನಗರದ ಬಸವೇಶ್ವರ ಕಾಲೇಜು ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಡಿವಿಎಸ್ಗೆ ಚಿಕಿತ್ಸೆ ನೀಡಲಾಗಿದೆ. ಆದರೆ, ಹೆಚ್ಚುವರಿ ಚಿಕಿತ್ಸೆಗೋಸ್ಕರ ಆಂಬ್ಯುಲೆನ್ಸ್ನಲ್ಲಿ ಜಿರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರದುರ್ಗ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಹೊಳಲ್ಕೆರೆ ಶಾಸಕ ಚಂದ್ರಪ್ಪ ಅವರು ಆಸ್ಪತ್ರೆಗೆ ದೌಡಾಯಿಸಿದ್ದರು. ಡಿವಿಎಸ್ ಆರೋಗ್ಯದ ಬಗ್ಗೆ ವೈದ್ಯರನ್ನು ವಿಚಾರಿಸಿದರು.
ಕೆಲ ಹೊತ್ತು ಬಸವೇಶ್ವರ ಆಸ್ಪತ್ರೆಯ ಬಳಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು. ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಬೆಂಗಳೂರು ಆಸ್ಪತ್ರೆಯಲ್ಲಿ ಕೇಂದ್ರ ಸಚಿವರ ಡಿವಿಎಸ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.