ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಲೆನಾಡು ಪ್ರದೇಶದ ಮಾರಕ ಆಗಬಹುದಾದ ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆಯಲ್ಲಿ ಮಾತನಾಡಿದರು.
ಇದನ್ನೂ ಓದಿ | ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ಭಿನ್ನ ಸ್ವಾಗತ
ಸಚಿವ ಸಂಪುಟದಲ್ಲಿ ಉಪ ಸಮಿತಿ ರಚನೆ ಮಾಡಲಾಗಿದ್ದು, ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಧರಿಸಲಾಗಿದೆ. ವರದಿ ಜಾರಿಗೆ ಬರಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಸಿ.ಟಿ.ರವಿ, ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಡಿ.ವಿ.ಸದಾನಂದ್ ಗೌಡ, ರಾಜ್ಯ ಸಂಘಟನೆ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಡಿಸಿಎಂ ಗೋವಿಂದ್ ಕಾರಜೋಳ, ಲಕ್ಷ್ಮಣ್ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಶಾಸಕ ಅರವಿಂದ್ ಲಿಂಬಾವಳಿ, ಹಿರಿಯ ಮುಖಂಡ, ಮಾಜಿ ಸ್ಪೀಕರ್ ಡಿ.ಎಚ್.ಶಂಕರಮೂರ್ತಿ, ಸಂಸದ ಬಿ.ವೈ.ರಾಘವೇಂದ್ರ, ಮುಖಂಡರಾದ ಟಿ.ಡಿ.ಮೇಘರಾಜ್,ನರಸಿಂಹ ನಾಯಕ್ ಉಪಸ್ಥಿತರಿದ್ದರು.