ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗಣ್ಯ ನಾಯಕರೆಂದು ಎಲ್ಲರೂ ಒಪ್ಪಿಕೊಂಡಿದ್ದಾರೆ. ಅವರು ವಿಶ್ರಾಂತಿ ಪಡೆಯದೇ ಕೆಲಸ ಮಾಡುತ್ತಿದ್ದಾರೆ. ಮಾದರಿ ರಾಷ್ಟ್ರವಾಗಿ ಮಾಡಲು ಹಗಲಿರುಳು ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಇದನ್ನೂ ಓದಿ | ಡಿವಿಎಸ್ ಆರೋಗ್ಯದಲ್ಲಿ ದಿಢೀರ್ ಏರುಪೇರು ವಿಡಿಯೋ ರಿಪೋರ್ಟ್
ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆಯಲ್ಲಿ ಮಾತನಾಡಿದರು.
ಮತ್ತೊಂದು ಅವಧಿಗೆ ಮೋದಿ ಅವರು ಪ್ರಧಾನಿ ಆದರೆ ದೇಶ ಅಗ್ರಗಣ್ಯ ರಾಷ್ಟ್ರವಾಗಲಿದೆ. ಯಾವುದೇ ದೇವಸ್ಥಾನಕ್ಕೆ ಹೋದರೂ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ ಎಂದರು.
ರಾಜ್ಯ ಪ್ರವಾಸ: ಠೇವಣಿ ಕಳೆದುಕೊಳ್ಳಬಹುದು ಎಂಬ ಕಡೆ ಗೆದ್ದಿದ್ದೇವೆ. ವಿಧಾನ ಸಭೆ, ಲೋಕಸಭೆ ಉಪ ಚುನಾವಣೆಯಲ್ಲಿ ಗೆಲ್ಲಬೇಕಿದೆ. ಅದಕ್ಕಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ ಎಂದರು. ಬಾದಾಮಿ ಮತ್ತು ಬಸವಕಲ್ಯಾಣಕ್ಕೆ ಭೇಟಿ ನೀಡುವೆ ಎಂದು ಹೇಳಿದರು.