ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹಲವು ವರ್ಷಗಳಿಂದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಂಡುಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಮುಂದುವರಿದ ವರ್ಷಧಾರೆ, ಶುಂಠಿ ಬೆಳೆಗಾರರಿಗೆ ಸಂಕಟ
ನೂತನವಾಗಿ ಸೇವೆಗೆ ನಿಯುಕ್ತರಾದ ಶಿಕ್ಷಕರ ಕಾಯಂ ಪೂರ್ವ ಸೇವಾವಧಿ ತೃಪ್ತಿಕರವಾಗಿರುವ ಬಗ್ಗೆ ಆದೇಶ ಹೊರಡಿಸುವುದು, ಶಿಕ್ಷಕರ ಮೇಲೆ ಬಹುದಿನಗಳಿಂದ ಬಾಕಿ ಇರುವ ಇಲಾಖೆ ವಿಚಾರಣೆ ಬಾಕಿ ಇರುವುದು, ನಿವೃತ್ತ ಶಿಕ್ಷಕರ ಸೌಲಭ್ಯಗಳನ್ನು ನೀಡದಿರುವುದು, ವೈದ್ಯಕೀಯ ವೆಚ್ಚದ ಮರುಪಾವತಿ, ವೇತನ ವಿಳಂಬ ಮುಂತಾದ ಸಮಸ್ಯೆಗಳು ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲೂ ಬಾಕಿ ಇರುವುದು. ಇವುಗಳು ಭಾರಿ ಬೇಸರ ತಂದಿವೆ ಎಂದು ತಿಳಿಸಿದರು.
ಶಿಕ್ಷಕರ ಮುಂಬಡ್ತಿ ಸಂಬಂಧಪಟ್ಟ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಜಿಲ್ಲೆಯ ಶಿಕ್ಷಕರ ಎಸ್.ಆರ್. ದಾಖಲೆಗಳ ಕುರಿತೂ ಸಾಕಷ್ಟು ದೂರುಗಳಿವೆ. ವೇತನ, ಭತ್ಯೆಗಳ ಪಾವತಿಗೆ ಸಂಬಂಧಿಸಿದಂತೆ ಎಚ್.ಆರ್.ಎಂ.ಎಸ್.ನಲ್ಲಿ ತಾಂತ್ರಿಕ ದೋಷವಿರುವ ಬಗ್ಗೆಯೂ ಆರೋಪಗಳು ಕೇಳಿ ಬರುತ್ತಿವೆ. ಇವುಗಳನ್ನು ಸರಿಪಡಿಸಲು ತಾಂತ್ರಿಕ ಸಲಹೆಗಾರರ ಸಲಹೆಯನ್ನು ಪಡೆಯಬೇಕು. ಜಿಲ್ಲೆಯಲ್ಲಿ ಒಬ್ಬ ಹೊಣೆಗಾರಿಕೆ ವಹಿಸಬೇಕು.
– ಸಿ.ಎಸ್.ಷಡಕ್ಷರಿ, ಅಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘ
ಇವುಗಳನ್ನು ಅನಗತ್ಯ ವಿಳಂಬ ಮಾಡದೇ ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಸಂಬಂಧ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂಧು ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರಿಗೆ ಕೋರಿದರು.
ಇದನ್ನೂ ಓದಿ | ಮಲ್ಲ ಮೂವಿಯಲ್ಲಿ ಮಿಂಚಿದ್ದ ಆನೆಯ ಆರ್ಭಟ, ಸಕ್ರೆಬೈಲಲ್ಲಿ ಕೆಲಹೊತ್ತು ಆತಂಕ
ಶಿಕ್ಷಕರ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಇಲಾಖೆ ವಿಚಾರಣೆ ಕಾಯ್ದಿರಿಸಿದ್ದಲ್ಲಿ ಕೂಡಲೆ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಈ ವಿಷಯದಲ್ಲಿ ಅನಗತ್ಯ ವಿಳಂಬ ಸರಿಯಲ್ಲ. ಅಧಿಕಾರ ದುರ್ಬಳಕೆಯಂತಹ ಪ್ರಕರಣಗಳಲ್ಲಿ ನಿಯಮಾನುಸಾರ ಕ್ರಮವಹಿಸುವ ಬಗ್ಗೆ ನೌಕರರ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದರು.
ಮುಂಬಡ್ತಿ ಮತ್ತು ಕಾಲಮಿತಿ ಬಡ್ತಿ ಕುರಿತಾದ ಕಡತಗಳನ್ನು ಶೀಘ್ರವೇ ವಿಲೇಗೊಳಿಸಿ. ಆಯಾ ಶಾಲೆಗಳಲ್ಲಿನ ಬಟವಾಡೆ ಅಧಿಕಾರಿ ಅಥವಾ ಪ್ರಥಮ ದರ್ಜೆ ಸಹಾಯಕರಿಗೆ ಎಚ್.ಆರ್.ಎಂ.ಎಸ್. ನಿರ್ವಹಣೆ ತರಬೇತಿ ನೀಡಿ. ಮುಂದಿನ ದಿನಗಳಲ್ಲಿ ನ್ಯೂನತೆಗಳು ಮುಂದುವರೆದಲ್ಲಿ ಶಾಲೆ, ಕಚೇರಿಯ ವ್ಯವಸ್ಥಾಪಕರನ್ನೇ ಹೊಣೆಗಾರರನ್ನಾಗಿ ಮಾಡಿ.
– ಎಂ.ಎಲ್.ವೈಶಾಲಿ, ಜಿಪಂ ಸಿಇಒ
ಜಿಪಂ ಕಚೇರಿಯ ನಜೀರಸಾಬ್ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರ ಕೋರಿಕೆಯ ಮೇರೆಗೆ ಸೋಮವಾರ ಜಿಪಂ ಸಿಇಒ, ಡಿಡಿಪಿಐ, ಎಲ್ಲ ಬಿಇಒ ಹಾಗೂ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಸಭೆ ಜರುಗಿತು. ಅಲ್ಲಿ ಶಿಕ್ಷಕರು ಹಲವು ಸಮಸ್ಯೆಗಳು ಅನಾವರಣಗೊಂಡವು.
ಡಯಟ್ ಪ್ರಾಂಶುಪಾಲ ಬಿ.ಆರ್.ಬಸವರಾಜು, ನೌಕರರ ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.