ಸುದ್ದಿ ಕಣಜ.ಕಾಂ
ಭದ್ರಾವತಿ: ತಾಲೂಕಿನ ಮೂವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಅವರು ಆದೇಶಿಸಿದ್ದಾರೆ.
ಇದನ್ನೂ ಓದಿ | ಜನವರಿ 10ರಂದು ಶಿವಮೊಗ್ಗದಲ್ಲಿ ನಡೆಯಲಿದೆ ಶ್ವಾನ, ಬೆಕ್ಕು ಪ್ರದರ್ಶನ, ಕಂಪ್ಲೀಟ್ ಮಾಹಿತಿ ಇಲ್ಲಿದೆ
ಅಮಾನತು ಆದವರು: ಭದ್ರಾವತಿ ತಾಲೂಕಿನ ಕೂಡ್ಲಗೆರೆ ಗ್ರಾಮ ಪಂಚಾಯಿತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ಸತೀಶ್ ಗೌಡ, ಕಾಗೆಕೊಡಮಗ್ಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ಶ್ರೀಧರ್ ನಾಯ್ಕ ಹಾಗೂ ಹೊಸೂರು ಗ್ರಾಪಂ ವ್ಯಾಪ್ತಿಯ ಕಂಬದಾಳ ಪ್ರಭಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಮ್ಮದ್ ಅಲಿ ಅವರನ್ನು ಅಮಾನತುಗೊಳಿಸಲಾಗಿದೆ.
ಇದನ್ನೂ ಓದಿ | ಭದ್ರಾವತಿಯಲ್ಲಿ ಹನ್ನೊಂದು ಜನ
ಕಾರಣ: ಕರ್ತವ್ಯದಲ್ಲಿ ಉದಾಸೀನತೆ ಮತ್ತು ನಿರ್ಲಕ್ಷ್ಯ ತೋರಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಅಮಾನತುಗೊಳಿಸಲಾಗಿದೆ.
ಸರಿಯಾಗಿ ಕಸ ವಿಲೇ ಮಾಡದಿರುವುದು, ನರೇಗಾ ಅನುಷ್ಠಾನದಲ್ಲಿ ಲೋಪ, ನರೇಗಾದಲ್ಲಿ ಕಳಪೆ ಸಾಧನೆ, ಸಕಾಲದಲ್ಲಿ ಅರ್ಜಿಗಳನ್ನು ಅಪ್ ಲೋಡ್ ಮಾಡದೇ ಇರುವುದು, ಗ್ರಾಪಂ ದಾಖಲೆಗಳನ್ನು ಡಿಜಟಲೀಕರಣಗೊಳಿಸಲು ಅಗತ್ಯ ದಾಖಲೆಗಳನ್ನು ನೀಡದಿರುವುದು ಹೀಗೆ ವಿವಿಧ ಕಾರಣಗಳಿಂದಾಗಿ ಅಮಾನತುಗೊಳಿಸಲಾಗಿದೆ.