ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯನ್ನು ಕಾಂಗ್ರೆಸ್ ಮುಕ್ತವಾಗಿಸಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಕರೆ ನೀಡಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಹಿರಿಯರ ಶ್ರಮದಿಂದ ಶಿವಮೊಗ್ಗ ಬಿಜೆಪಿ ಭದ್ರಕೋಟೆಯಾಗಿ ಮಾರ್ಪಟ್ಟಿದೆ. ಬರುವ ದಿನಗಳಲ್ಲಿ ಇಡೀ ಜಿಲ್ಲೆಯೇ ಕಾಂಗ್ರೆಸ್ ಮುಕ್ತಗೊಳಿಸುವಂತೆ ಹೇಳಿದರು.
ಸಮಾಜವಾದಿ ಕ್ಷೇತ್ರವೀಗ ಬಿಜೆಪಿಮಯ: ಈ ಹಿಂದೆ ಶಿವಮೊಗ್ಗ ಜಿಲ್ಲೆಯನ್ನು ಸಮಾಜವಾದಿ ಕ್ಷೇತ್ರ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಬಿಜೆಪಿ ಕ್ಷೇತ್ರವಾಗಿ ಬದಲಾಗಿದೆ ಎಂದರು.