ಸುದ್ದಿ ಕಣಜ.ಕಾಂ
ಬೆಂಗಳೂರು: ಪ್ರತಿ ವರ್ಷ ಏಪ್ರಿಲ್ 21ರಂದು ರಾಜ್ಯ ಸರ್ಕಾರಿ ನೌಕರರ ದಿನವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಸರ್ಕಾರದ ಆದೇಶ ಹೊರಬೀಳಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.
ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಏಪ್ರಿಲ್ 21ರಂದೇ ಮಾತನಾಡಿದ್ದರು. ಹೀಗಾಗಿ, ಈ ದಿನವನ್ನು ಸರ್ಕಾರಿ ನೌಕರರ ದಿನವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ಸರ್ವೋತ್ತಮ ಪ್ರಶಸ್ತಿ: ಜಿಲ್ಲಾ ಮತ್ತ ರಾಜ್ಯ ಮಟ್ಟದಲ್ಲಿ ಐಎಎಸ್ ಅಧಿಕಾರಿಗಳಿಂದ ಡಿ ಗ್ರೂಪ್ ನೌಕರರವರೆಗೆ ಎಲ್ಲ ಹಂತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಆ ದಿನದಂದು ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಕರ್ನಾಟಕದಲ್ಲೇ ಮೊದಲು: ದೇಶದ ಯಾವುದೇ ರಾಜ್ಯದಲ್ಲಿಯೂ ಸರ್ಕಾರಿ ನೌಕರರ ದಿನಾಚರಣೆ ಇಲ್ಲ. ಕರ್ನಾಟಕದಲ್ಲಿ ಆರಂಭವಾಗುತ್ತಿರುವುದೇ ಮೊದಲು. ಈ ಬಗ್ಗೆ ರಾಜ್ಯ ಸರ್ಕಾರಿ ನೌಕರರು ಬಹುದಿನಗಳಿಂದ ಬೇಡಿಕೆ ಇಟ್ಟಿದ್ದರು. ಈಗ ಇದು ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆ ಇದೆ ಎಂದು ಹೇಳಿದರು.