ಸುದ್ದಿ ಕಣಜ.ಕಾಂ
ಬೆಂಗಳೂರು: ಪ್ರಸಕ್ತ ಸಾಲಿನ ಅವಧಿಗೆ ಗಳಿಕೆ ರಜೆ ನಗದೀಕರಣ ಪಡೆಯುವ ಸೌಲಭ್ಯಕ್ಕೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಕತ್ತರಿ ಹಾಕಿದೆ.
ಈ ಸಂಬಂಧ ಜನವರಿ 19ರಂದು ಕೆಪಿಟಿಸಿಎಲ್ ಆಡಳಿತ ಮತ್ತು ಮಾನವ ಸಂಪನ್ಮೂಲ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
2021ರ ಜನವರಿ 1ರಿಂದ ಡಿಸೆಂಬರ್ 31ರ ವರೆಗಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಲಾಗಿದೆ. ಆದರೆ, 2021ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ನಿವೃತ್ತಿ ಹೊಂದುವ ಎಲ್ಲ ಅರ್ಹ ನೌಕರರು, ಅಧಿಕಾರಿಗಳು ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.