ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಭೂ ವ್ಯಾಜ್ಯದ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಖಾರವಾಗಿ ಮಾತನಾಡಿದ್ದಾರೆ.
ಉದ್ಧವ್ ಠಾಕ್ರೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಕರ್ನಾಕದ ಒಂದಿಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಕೊಡುವುದಿಲ್ಲ ಎಂದು ಹೇಳಿದ್ದಾರೆ.
ಅಣ್ಣ ತಮ್ಮಂದಿರಂತಿದ್ದೇವೆ: ಕರ್ನಾಟಕದ ಒಂದಿಂಚೂ ಭೂಮಿಯನ್ನು ಮಹಾರಾಷ್ಟ್ರಕ್ಕೆ ಹೋಗಲು ಬಿಡುವುದಿಲ್ಲ. ಕರ್ನಾಟಕದವರು ಮಹಾರಾಷ್ಟ್ರದಲ್ಲಿದ್ದಾರೆ. ಹಾಗಂತ ಆ ಎಲ್ಲ ಭೂಮಿಯನ್ನು ಕರ್ನಾಟಕಕ್ಕೆ ಜೋಡಿಸಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಕರ್ನಾಟಕದ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಗೋವಾದೊಂದಿಗೆ ಅಣ್ಣ ತಮ್ಮಂದಿರಂತೆ ಬದುಕುತ್ತಿದ್ದೇವೆ. ಭೂಮಿ, ನೀರು ವಿಚಾರದಲ್ಲಿ ಕ್ಯಾತೆ ತೆಗೆಯುವ ಅಭಿಪ್ರಾಯ ಮಹಾರಾಷ್ಟ್ರದ ಕೆಲವರ ಅಭಿಪ್ರಾಯವಾಗಿದೆ ಎಂದರು.
ಠಾಕ್ರೆ ಏನು ಹೇಳಿದ್ದರು?: ಬೆಳಗಾವಿ ಗಡಿಯ ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸಿಕೊಳ್ಳಲು ಮಹಾ ಸರ್ಕಾರ ಬದ್ಧವಾಗಿದೆ ಎಂಬ ಹೇಳಿಕೆಯನ್ನು ಉದ್ಧವ್ ಠಾಕ್ರೆ ನೀಡಿದ್ದರು.