ಸುದ್ದಿ ಕಣಜ.ಕಾಂ
ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನುಮೋದನೆ ನೀಡಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಆರ್ಥಿಕ ಇಲಾಖೆ ತಡೆಹಿಡಿದಿತ್ತು. ಈ ನಿರ್ಧಾರವನ್ನು ಬಿ.ಎಸ್.ವೈ. ಹಿಂಪಡೆದಿದ್ದಾರೆ.
ರಾಜ್ಯ ಸರ್ಕಾರ ನೌಕರರ ಬೇಡಿಕೆಗೆ ಸ್ಪಂದನೆ ನೀಡಿದೆ. ಗಳಿಕೆ ರಜೆ ನಗದೀಕರಣ ಸಂಬಂಧ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವಂತೆ ಸೂಚನೆ ನೀಡಿದ್ದಾರೆ. ಸೋಮವಾರ ಆದೇಶ ಹೊರಬೀಳುವ ಸಾಧ್ಯತೆ ಇದೆ.
– ಸಿ.ಎಸ್.ಷಡಾಕ್ಷರಿ, ಅಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘ
ಕೋವಿಡ್ ಸೃಷ್ಟಿಸಿದ್ದ ಸಮಸ್ಯೆಗಳಿಂದಾಗಿ ಆರ್ಥಿಕ ಸಮಸ್ಯೆ ಉಲ್ಬಣಿಸಿತ್ತು. ಹೀಗಾಗಿ, ನೌಕರರು ಸಹ ಸರ್ಕಾರದ ನಿರ್ಧಾರ ವಿರೋಧ ವ್ಯಕ್ತಪಡಿಸಿರಲಿಲ್ಲ. ಆದರೆ, ಇದನ್ನೇ 2021ಕ್ಕೂ ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಂಡಿದ್ದಕ್ಕೆ ನೌಕರರ ಸಂಘ ವಿರೋಧ ವ್ಯಕ್ತಪಡಿಸಿತ್ತು.
ನೌಕರರ ಸಂಘದ ಕೋರಿಕೆಗೆ ಮಾನ್ಯ: ಸರ್ಕಾರಿ ನೌಕರರ ಸಂಘದ ಕೋರಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾನ್ಯ ಮಾಡಿದ್ದಾರೆ. ಶುಕ್ರವಾರ ಕಡತಗಳನ್ನು ಪರಿಶೀಲಿಸಿದ ಅವರು ಈ ಹಿಂದಿನ ಆದೇಶ ಹಿಂಪಡೆಯಲು ನಿರ್ಧರಿಸಿದ್ದಾರೆ. 700 ಕೋಟಿ ರೂ. ಬಿಡುಗಡೆಗೆ ಯಡಿಯೂರಪ್ಪ ಅವರು ಅನುಮೋದನೆ ನೀಡಿದ್ದಾರೆ.