ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲ್ಲೂಕಿನ ಹುಣಸೋಡು ಕಲ್ಲು ಕ್ವಾರಿ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಬೆಕ್ಕಿನ ಕಲ್ಮಠ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಸಾಂತ್ವನ ಹೇಳಿದರು.
ಇದನ್ನೂ ಓದಿ । ಬೆಕ್ಕಿನಕಲ್ಮಠದ ವೆಬ್ ಸೈಟ್ ಬಿಡುಗಡೆ
ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಯನ್ನು ಎಲ್ಲರೂ ವಿರೋಧಿಸಬೇಕು. ಇಂತಹ ಘಟನೆ ಮರುಕಳಿಸದಂತೆ ಸರ್ಕಾರ ಎಚ್ಚರ ವಹಿಸಬೇಕು ಎಂದು ತಿಳಿಸಿದರು.
ಮೂಲ ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಿ | ಈ ಘಟನೆ ಮೂಲ ಪತ್ತೆ ಹಚ್ಚಿ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಸ್ಫೋಟದಿಂದಾಗಿ ನೊಂದ ಹಾಗೂ ತೊಂದರೆಗೀಡಾದವರಿಗೆ ಹೆಚ್ಚಿನ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಸ್ಮರಣೋತ್ಸವ ಸಮಿತಿ ಅಧ್ಯಕ್ಷೆ ಎಸ್.ವೈ. ಅರುಣಾದೇವಿ, ಕಾರ್ಯಾಧ್ಯಕ್ಷ ಎಚ್.ಎಂ. ಚಂದ್ರಶೇಖರಪ್ಪ, ಎಚ್.ವಿ. ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಶಾಂತಾ ಆನಂದ್, ರತ್ನಾ ಮಂಜುನಾಥ್, ಶಕುಂತಲಾ ಟಿ.ಬಿ. ಜಗದೀಶ್, ಕಿರಣ್ ದೇಸಾಯಿ, ಎನ್.ಜೆ. ರಾಜಶೇಖರ್, ಶಾಂತವೀರಪ್ಪ, ಪ್ರಚಾರ ಸಮಿತಿಯ ಅಧ್ಯಕ್ಷ ಚನ್ನಬಸಪ್ಪ ಉಪಸ್ಥಿತರಿದ್ದರು.